ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಅವರು, ಡಿಸೆಂಬರ್ 3ರಂದು ಬೆಳಗಾವಿಯಲ್ಲಿ ಗಡಿ ವಿವಾದದ ವಿಚಾರವಾಗಿ ಸಭೆ ನಡೆಸಲಿರುವ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ‘ಯಾರು ಬೇಕಾದರೂ ತಮ್ಮವರ ಮನೆಗೆ, ಮದುವೆಗೆ, ಊಟಕ್ಕೆ ಬಂದರೆ ನಾವು ಏನೂ ಮಾಡಲಾಗುವುದಿಲ್ಲ. ಶಾಂತಿ ಕದಡಿದರೆ ಎಂಇಎಸ್ ಪುಂಡರಾದರೂ ಸರಿ, ಯಾರಾದರೂ ಸರಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದರು.