ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಸಾಮಾಜಿಕ ಕಳಕಳಿ ಇಲ್ಲದ ಕಾರಣಕ್ಕೆ ದುರಂತಗಳು ಸಂಭವಿಸುತ್ತಿದೆ. ಹೊಲಸನ್ನು ಕೈಯಿಂದ ತೆಗೆಸುವುದು, ತಲೆಯ ಮೇಲೆ ಹೊರುವುದಕ್ಕೆ ನಿಷೇಧ ಹೇರಿದೆ. ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಸಫಾಯಿ ಕರ್ಮಚಾರಿ ಆಯೋಗ ರಚಿಸಿದೆ. ಎಸ್ಸಿಟಿಪಿ, ಟಿಎಸ್ಪಿ ಅನುದಾನ ಬಳಕೆಗೂ ಅವಕಾಶ ಇದೆ. ಸಫಾಯಿ ಕರ್ಮಚಾರಿಗಳ ಅನುಕೂಲಕ್ಕೆ ಇನ್ನಷ್ಟು ಅನುದಾನ ನೀಡಲಾಗುವುದು. ಇಂಥ ಘಟನೆಗಳುಇನ್ನು ಮುಂದೆ ಸಂಭವಿಸಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದರು.