‘ಭಾರತದಲ್ಲಿ ಪ್ರಜಾಪ್ರತಿನಿಧಿ ಸಭೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು ಚಾಮರಾಜ ಒಡೆಯರ್ ಅವರು. 1881ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತಂದರು. ಆದರೆ, ಇದಕ್ಕೆ ಶಾಸನಬದ್ಧ ಮಾನ್ಯತೆ ನೀಡಿ ಇಂತಹ ಒಂದು ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1923ರಲ್ಲಿ ಹೊಸ ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿ ಜಾತಿ, ವರ್ಗಗಳನ್ನು ನೋಡದೆ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿ ಆದರ್ಶ ಪ್ರಜಾಪ್ರಭುತ್ವದ ಮಾದರಿಯನ್ನು ಅವರು ಹಾಕಿಕೊಟ್ಟರು’ ಎಂದು ಅವರು ಸ್ಮರಿಸಿದ್ದಾರೆ.