ಪ್ರಾಂಶುಪಾಲರು ಬಾರಿನ ಹೊರಗೆ ಕಾದಿರುವ ವಿಚಾರ ತಿಳಿದ ಕೆಲವು ವಿದ್ಯಾರ್ಥಿಗಳು ಕೂಡಲೇ ಸ್ಥಳದಿಂದ ಪಲಾಯನ ಮಾಡಿದ್ದಾರೆ. ಆದರೂ, ಕೆಲವು ವಿದ್ಯಾರ್ಥಿಗಳು ಬಾರಿನಿಂದ ಹೊರಗೆ ಬರದಿರುವುದನ್ನು ಮನಗಂಡ ಪ್ರಾಂಶುಪಾಲರು ಬಾರಿನ ಒಳಗೆ ಹೋಗಿ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿದ್ದಾರೆ. ಬಳಿಕ ಬಾರಿನಲ್ಲಿದ್ದ ಮೇಲ್ವಿಚಾರಕನನ್ನು ಕುರಿತು ವಿದ್ಯಾರ್ಥಿಗಳಿಗೆ ಈ ವಿಚಾರದಲ್ಲಿ ಸಹಕಾರ ನೀಡುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡು ಎಚ್ಚರಿಸಿದ್ದಾರೆ.