ಹಿರಿಯ ಅಧಿಕಾರಿಗಳ ತಂಡವೊಂದು ಮೈಸೂರಿಗೆ ತೆರಳುತ್ತಿದೆ. ನುರಿತ ಅಧಿಕಾರಿಗಳ ತಂಡವೊಂದನ್ನು ರಚಿಸಿಕೊಂಡು, ತನಿಖೆ ಮುಂದುವರಿಸುವಂತೆ ಪ್ರತಾಪ್ ರೆಡ್ಡಿ ಅವರಿಗೆ ಸೂಚಿಸಲಾಗಿದೆ. ಗುರುವಾರ ತಾವು ಮೈಸೂರಿಗೆ ಭೇಟಿನೀಡಲಿದ್ದು, ಅಧಿಕಾರಿಗಳ ಸಭೆ ನಡೆಸಲಾಗುವುದು. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.