ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಂಗಳವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ‘ಬೇಸಿಗೆ ರಜೆ ಬಳಿಕ ಶಾಲೆ ಆರಂಭದ ಮೊದಲ ದಿನ ಹಾಜರಾತಿ ಕಡಿಮೆಯೇ ಇರುತ್ತದೆ. ಆದರೆ, ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕೆಲವು ಜಿಲ್ಲೆಗಳಲ್ಲಿ ಶೇ 76ಕ್ಕೂ ಹೆಚ್ಚಿದೆ. ಒಟ್ಟಾರೆ ಹಾಜರಾತಿ ಶೇ 41ಕ್ಕೂ ಹೆಚ್ಚಿದೆ’ ಎಂದರು.