‘ಕೇಂದ್ರದ ಹಿರಿಯ ಅಧಿಕಾರಿ ಕೆ.ವಿ.ಪ್ರತಾಪ್ ಅವರ ನೇತೃತ್ವದಲ್ಲಿ ಆರು ಮಂದಿ ಅಧಿಕಾರಿಗಳನ್ನು ಒಳಗೊಂಡ ತಂಡ ಬರಲಿದ್ದು, ಸೆ. 7 ರಂದು ಮುಖ್ಯಮಂತ್ರಿಯರ ಜತೆ ಚರ್ಚೆ ನಡೆಸಲಿದೆ. ಸೆ. 8 ರಂದು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಲಿದೆ. ಸೆ.9 ರಂದು ಕೇಂದ್ರದ ತಂಡದ ಜತೆಗೆ ನಾವು ಚರ್ಚೆ ನಡೆಸಿ, ರಾಜ್ಯದ ಪರವಾಗಿ ₹4,800 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ’ ಎಂದರು.