<p><strong>ಬೆಂಗಳೂರು:</strong> ರಾಜ್ಯದ ಎಲ್ಲಾ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಆಸ್ತಿ ನೋಂದಣಿ ಪ್ರಕ್ರಿಯೆ ಬುಧವಾರ ಪುನರ್ ಆರಂಭಗೊಂಡಿದೆ.</p>.<p>ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ತಾಂತ್ರಿಕ ತಂಡ ಹಗಲು–ರಾತ್ರಿ ನಡೆಸಿ ಸಮಸ್ಯೆ ಸರಿಪಡಿಸಿದೆ. ಬುಧವಾರ ಬೆಳಿಗ್ಗೆ 11.30ರ ಬಳಿಕ ನೋಂದಣಿ ಪ್ರಕ್ರಿಯೆ ಆರಂಭವಾಯಿತು.</p>.<p>ಸೋಮವಾರ ಬೆಳಿಗ್ಗೆಯಿಂದ ಸರ್ವರ್ ಸ್ಥಗಿತಗೊಂಡಿದ್ದರಿಂದ ಕುಟುಂಬ ಸಮೇತ ಆಸ್ತಿ ನೋಂದಣಿಗಾಗಿ ಕಚೇರಿಗೆ ಹೋಗಿದ್ದವರು ಪರದಾಡಿದ್ದರು. ಸೋಮವಾರ ಮತ್ತು ಮಂಗಳವಾರ ಎರಡೂ ದಿನ ಕಚೇರಿ ಎದುರೇ ಕಾದು ಕುಳಿತು ಅಧಿಕಾರಿಗಳ ಧೋರಣೆಗೆ ಗೊಣಗಾಡಿದ್ದರು.</p>.<p>ಬುಧವಾರ ಬೆಳಿಗ್ಗೆ ವೇಳೆಗೆ ಸರ್ವರ್ ಸರಿಯಾದರೂ ಇ.ಸಿ ಪಡೆಯಲು ಸಾಧ್ಯವಾಗಲಿಲ್ಲ. ಕಾವೇರಿ ಪೋರ್ಟಲ್ನಲ್ಲಿ ಇರುವ ತಾಂತ್ರಿಕ ತೊಂದರೆ ಇನ್ನೂ ನಿವಾರಣೆ ಆಗದ ಕಾರಣ ಇ.ಸಿ ವಿತರಣೆ ಸಾಧ್ಯವಾಗಲಿಲ್ಲ. ಗುರುವಾರ ಬೆಳಿಗ್ಗೆ ವೇಳೆಗೆ ಆ ಸಮಸ್ಯೆಯೂ ಪರಿಹಾರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಆಸ್ತಿ ನೋಂದಣಿ ಪ್ರಕ್ರಿಯೆಗೆ ಸರ್ವರ್ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಎಲ್ಲಾ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಆಸ್ತಿ ನೋಂದಣಿ ಪ್ರಕ್ರಿಯೆ ಬುಧವಾರ ಪುನರ್ ಆರಂಭಗೊಂಡಿದೆ.</p>.<p>ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ತಾಂತ್ರಿಕ ತಂಡ ಹಗಲು–ರಾತ್ರಿ ನಡೆಸಿ ಸಮಸ್ಯೆ ಸರಿಪಡಿಸಿದೆ. ಬುಧವಾರ ಬೆಳಿಗ್ಗೆ 11.30ರ ಬಳಿಕ ನೋಂದಣಿ ಪ್ರಕ್ರಿಯೆ ಆರಂಭವಾಯಿತು.</p>.<p>ಸೋಮವಾರ ಬೆಳಿಗ್ಗೆಯಿಂದ ಸರ್ವರ್ ಸ್ಥಗಿತಗೊಂಡಿದ್ದರಿಂದ ಕುಟುಂಬ ಸಮೇತ ಆಸ್ತಿ ನೋಂದಣಿಗಾಗಿ ಕಚೇರಿಗೆ ಹೋಗಿದ್ದವರು ಪರದಾಡಿದ್ದರು. ಸೋಮವಾರ ಮತ್ತು ಮಂಗಳವಾರ ಎರಡೂ ದಿನ ಕಚೇರಿ ಎದುರೇ ಕಾದು ಕುಳಿತು ಅಧಿಕಾರಿಗಳ ಧೋರಣೆಗೆ ಗೊಣಗಾಡಿದ್ದರು.</p>.<p>ಬುಧವಾರ ಬೆಳಿಗ್ಗೆ ವೇಳೆಗೆ ಸರ್ವರ್ ಸರಿಯಾದರೂ ಇ.ಸಿ ಪಡೆಯಲು ಸಾಧ್ಯವಾಗಲಿಲ್ಲ. ಕಾವೇರಿ ಪೋರ್ಟಲ್ನಲ್ಲಿ ಇರುವ ತಾಂತ್ರಿಕ ತೊಂದರೆ ಇನ್ನೂ ನಿವಾರಣೆ ಆಗದ ಕಾರಣ ಇ.ಸಿ ವಿತರಣೆ ಸಾಧ್ಯವಾಗಲಿಲ್ಲ. ಗುರುವಾರ ಬೆಳಿಗ್ಗೆ ವೇಳೆಗೆ ಆ ಸಮಸ್ಯೆಯೂ ಪರಿಹಾರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಆಸ್ತಿ ನೋಂದಣಿ ಪ್ರಕ್ರಿಯೆಗೆ ಸರ್ವರ್ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>