ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ಜಿಎಚ್ಎಂಸಿ ಚುನಾವಣಾ ಪ್ರಭಾರಿಯನ್ನಾಗಿ ನೇಮಿಸಲಾಗಿದೆ. ಸುಧಾಕರ್, ಸತೀಶ್ ರೆಡ್ಡಿ, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಆಶೀಶ್ ಶೆಲರ್, ಗುಜರಾತ್ನ ಪ್ರದೀಪ್ ಸಿಂಗ್ ವಘೇಲಾ ಅವರನ್ನು ಸಹ ಪ್ರಭಾರಿಗಳನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಆದೇಶ ಹೊರಡಿಸಿದ್ದಾರೆ.