ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಕಟಾವು ಮತ್ತು ಸಾಗಣೆ ವೆಚ್ಚವನ್ನು ರೈತರಿಗೆ ಹೊರೆಯಾಗದಂತೆ ನಿದಿ ಮಾಡಬೇಕು. ಕಾರ್ಖಾನೆಗಳು ತೂಕದಲ್ಲಿ ಮಾಡುವ ಮೋಸವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ನಾಯಕಿ ಸುನಂದಾ ಜಯರಾಂ ಸೇರಿದಂತೆ ಹಲವು ರೈತ ಮುಖಂಡರು ಆಗ್ರಹಿಸಿದರು.