ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತಿ, ಕಲಾವಿದರ ಜತೆ ಕಾಫಿಯೊಂದಿಗೆ ಸುನಿಲ್ ಚರ್ಚೆ

Last Updated 10 ಆಗಸ್ಟ್ 2021, 20:11 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ಬುಧವಾರ 2019–20 ನೇ ಸಾಲಿನ ವಿವಿಧ ವಾರ್ಷಿಕ ಗೌರವ ಪ್ರಶಸ್ತಿ ಪಡೆದ ಇಬ್ಬರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಇಲಾಖಾ ಸಚಿವರಾಗಿ ಕಾರ್ಯಾರಂಭ ಮಾಡಲಿದ್ದಾರೆ.

ಈ ಕಾರ್ಯಕ್ರಮ ಬುಧವಾರ ಬೆಳಿಗ್ಗೆ 9 ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಆವರಣದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆಗೆ ಭೇಟಿ ನೀಡಿ ಪುಸ್ತಕಗಳನ್ನು ಖರೀದಿಸಿ, ಬಳಿಕ ಕಲಾಕ್ಷೇತ್ರದ ಕ್ಯಾಂಟೀನ್‌ನಲ್ಲಿ ಸಾಹಿತಿಗಳು ಮತ್ತು ಕಲಾವಿದರೊಂದಿಗೆ ಕಾಫಿ ಸೇವಿಸುತ್ತಲೇ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಡಾ.ರಾಜ್‌ಕುಮಾರ್‌ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂಧನ ಇಲಾಖೆ ಅಧಿಕಾರ ವಹಿಸಿಕೊಳ್ಳುವುದಾಗಿ ಸುನಿಲ್‌ ತಿಳಿಸಿದ್ದಾರೆ.

ಮಂಗಳವಾರ ಎರಡೂ ಇಲಾಖೆಗಳ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT