ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಸರ್ಕಾರಿ ನೌಕರರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಉತ್ತಮ ಕಥೆ, ಕಾದಂಬರಿ, ಕವನ ಸಂಕಲನಗಳು ಮತ್ತು ಇತರೆ ಬರಹಗಳ ಮೂಲಕ ಗಮನ ಸೆಳೆದಿದ್ದಾರೆ. ಸಾಕಷ್ಟು ಮಹನೀಯರು ಕನ್ನಡ ಸೇವೆ ಮಾಡಿದ್ದಾರೆ. ಸಾಹಿತ್ಯ, ಸಂಸ್ಕೃತಿ, ಕಲೆಗಳಿಗೆ ಸಂಘ ಪ್ರೋತ್ಸಾಹ ನೀಡುತ್ತಾ ಬಂದಿದೆ. ಅದಕ್ಕಾಗಿ ಪ್ರತಿ ವರ್ಷ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಪ್ರತಿಭಾವಂತರನ್ನು ಗುರುತಿಸಿ, ಅವಕಾಶಗಳನ್ನು ನೀಡುತ್ತಿದೆ ಎಂದರು.