ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಸಡಿಲಿಕೆ ಮಾಡಲಾಗದು ಎಂದಿದ್ದ ಹೈಕೋರ್ಟ್, ಸಾರ್ವಜನಿಕ ಸೇವಕರು, ಸಂಸದರು ಹಾಗೂ ಶಾಸಕರು ಶಾಮೀಲಾಗಿದ್ದಾರೆ ಎನ್ನಲಾದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ ಅಪರಾಧ ನ್ಯಾಯಾಲಯಗಳು ಆದೇಶಿಸಿರುವ ತನಿಖೆಯ ಮೇಲೆ ನಿಗಾ ಇರಿಸಿ ಎಂದು ಲೋಕಾಯುಕ್ತ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.