ಹೆಸರಘಟ್ಟ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸುವಂತೆ ಒತ್ತಾಯಿಸಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಿಂದ ಗುರುವಾರ ಸಂಜೆ ಬೆಂಗಳೂರು ಕಡೆಗೆ ಸಾಗಿತು.
ಮಾಧ್ಯಮದೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ’ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂದಿಸುವ ನಿರೀಕ್ಷೆ ಇದ್ದು, ನಮ್ಮ ಹೋರಾಟ ಯಶಸ್ಸು ಕಾಣಲಿದೆ‘ಎಂದರು.
’ರಾಜ್ಯ ಸರ್ಕಾರಕ್ಕೆ ಮೀಸಲಾತಿ ನೀಡುವ ಸಂಪೂರ್ಣ ಪರಮಾಧಿಕಾರ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪರಮಾಧಿಕಾರ ಉಪಯೋಗಿಸಿಕೊಂಡು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಲಿ’ ಎಂದರು.