‘ಅಪಘಾತ ಹಾಗೂ ಮತ್ತಾವುದೇ ಅವಘಡ ಉಂಟಾದ ಸಂದರ್ಭಗಳಲ್ಲಿ ಪೊಲೀಸ್ ಇಲ್ಲವೇ ಅಗತ್ಯ ತುರ್ತು ಸೇವೆಗಳ ಸೌಲಭ್ಯ ಪಡೆಯಲು ಸಿದ್ಧಪಡಿಸಲಾಗಿರುವ 112ರ ತುರ್ತು ಕರೆ ದೂರವಾಣಿ ಸಂಖ್ಯೆಯಲ್ಲಿ ದೂರು ಸಲ್ಲಿಸಲು ಸಮಸ್ಯೆಯಾಗುತ್ತಿದೆ. ಆದ್ದರಿಂದ, ಮೊಬೈಲ್ ಫೋನ್ಗಳ ತಯಾರಿಕೆ ಸಂದರ್ಭದಲ್ಲಿಯೇ ಪ್ಯಾನಿಕ್ ಬಟನ್ ಅಳವಡಿಸಲು ನಿರ್ದೇಶನ ನೀಡಬೇಕು‘ ಎಂದು ಕೋರಿ ಬೆಂಗಳೂರಿನ ನಾಗದೇವನಹಳ್ಳಿಯ ಎನ್.ಟಿ.ಅರುಣ್ ಕುಮಾರ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.