ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾರಿಗೆ ಬಸ್ ಸಂಚರಿಸದಿದ್ದ ಸಂದರ್ಭದಲ್ಲಿಯೂ ನೌಕರರಿಗೆ ವೇತನ ನೀಡಲಾಗಿದೆ. ಒಂಬತ್ತು ಬೇಡಿಕೆಗಳ ಪೈಕಿ ವೇತನ ಪರಿಷ್ಕರಣೆ ಬಿಟ್ಟು ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಆದರೂ, ಹಠ ಹಿಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.