ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಮುಷ್ಕರ: ಹೋರಾಟಗಾರನಿಗೆ ಅಂತಃಕರಣ ಇರಬೇಕು-ಸುರೇಶ್ ಕುಮಾರ್

ಸಾರಿಗೆ ನೌಕರರ ಮುಷ್ಕರಕ್ಕೆ ಸಚಿವ ಸುರೇಶಕುಮಾರ್‌ ಪ್ರತಿಕ್ರಿಯೆ
Last Updated 9 ಏಪ್ರಿಲ್ 2021, 11:09 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಾರಿಗೆ ನೌಕರರ ಮುಷ್ಕರದ ನೇತೃತ್ವ ವಹಿಸಿಕೊಂಡ ಹೋರಾಟಗಾರನಿಗೆ ಅಂತಃಕರಣ ಹಾಗೂ ಸಮಾಜದ ಬಗ್ಗೆ ಕಾಳಜಿ ಇರಬೇಕು ಎಂದು ಶಿಕ್ಷಣ ಸಚಿವ ಎಸ್‌.ಸುರೇಶ ಕುಮಾರ್‌ ಸಲಹೆ ನೀಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾರಿಗೆ ಬಸ್‌ ಸಂಚರಿಸದಿದ್ದ ಸಂದರ್ಭದಲ್ಲಿಯೂ ನೌಕರರಿಗೆ ವೇತನ ನೀಡಲಾಗಿದೆ. ಒಂಬತ್ತು ಬೇಡಿಕೆಗಳ ಪೈಕಿ ವೇತನ ಪರಿಷ್ಕರಣೆ ಬಿಟ್ಟು ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಆದರೂ, ಹಠ ಹಿಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

‘ಕೊರೊನಾ ಸೋಂಕು ಕಾಣಿಸಿಕೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಸಮಸ್ಯೆ ಆಗುವಂತೆ ಹೋರಾಟ ಮಾಡುವುದು ಸರಿಯಲ್ಲ. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಚರ್ಚೆ ಮಾಡೋಣ. ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT