‘ಮುಂದಿನ ಶೈಕ್ಷಣಿಕ ವರ್ಷ ಹೇಗೆ ಆರಂಭವಾಗಲಿದೆ ಎಂಬ ಸವಾಲು ನಮ್ಮ ಮುಂದಿದೆ. ಶಾಲೆ ಪ್ರಾರಂಭಿಸಲು ಸುರೇಶ್ಕುಮಾರ್ ತುದಿಗಾಲ ಮೇಲೆ ನಿಂತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಶಾಲೆ ಆರಂಭ ಮಾಡುವುದಕ್ಕಿಂತ ನಮ್ಮ ಮಕ್ಕಳ ಆರೋಗ್ಯ, ಮಕ್ಕಳ ಕಲಿಕೆಯೇ ನನ್ನ ಪ್ರಥಮ ಆದ್ಯತೆಯಾಗಿದೆ. ಮಕ್ಕಳು ಶಾಲೆಯ ಸಂಪರ್ಕದಲ್ಲಿ ಇರುವಂತೆ ಮಾಡಲು ವಿದ್ಯಾಗಮ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯ ಬಗ್ಗೆ ಇಡೀ ದೇಶ ನಮ್ಮ ರಾಜ್ಯದತ್ತ ತಿರುಗಿ ನೋಡುತ್ತಿದೆ’ ಎಂದರು.