<p><strong>ಬೆಂಗಳೂರು</strong>: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವುದರಿಂದ ಕ್ರಿಸ್ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧಹೇರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p>ಕಳೆದ ಒಂದೇ ದಿನ ಕರ್ನಾಟಕದಲ್ಲಿ 456 ಕೋವಿಡ್ ಪ್ರಕರಣಗಳು ದೃಢಪಟ್ಟು, 6 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವಾರದಲ್ಲಿ ಸೋಂಕು ತಗುಲಿರುವುದು ಆತಂಕ ಹೆಚ್ಚುವಂತೆ ಮಾಡಿದೆ.</p>.<p>ಇನ್ನೊಂದೆಡೆ ಕೊರೊನಾವೈರಸ್ನ ರೂಪಾಂತರಿ ತಳಿಯಾದ ಓಮೈಕ್ರಾನ್ನ ಎರಡು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು ಈ ಸೋಂಕು ತಡೆಯಲು ಸರ್ಕಾರ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಸಾದ್ಯತೆ ಇದೆ ಎನ್ನಲಾಗಿದೆ</p>.<p>ಒಂದೇ ವಾರದಲ್ಲಿ ಕೊಡಗು, ಹಾವೇರಿ, ಧಾರವಾಡ, ದಾವಣಗೆರೆ, ಮಂಡ್ಯ, ಮೈಸೂರಲ್ಲಿ ಕೋವಿಡ್ ಪ್ರಕರಣಗಳು ದ್ವೀಗುಣಗೊಂಡಿವೆ. ಅಲ್ಲದೆ ಶಿವಮೊಗ್ಗ ಹಾಗೂ ಕೊಪ್ಪಳದಲ್ಲಿ ಒಂದೇ ದಿನದಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿವೆ.</p>.<p>ಕಳೆದ ನವೆಂಬರ್ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತೆ ಕೋವಿಡ್ ತಡೆಯಲು ಬಿಗಿ ನಿಯಂತ್ರಣಾ ಕ್ರಮಗಳು ಜಾರಿಯಾಗುವ ಮುನ್ಸೂಚನೆ ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:<a href="https://www.prajavani.net/entertainment/cinema/gandhada-gudi-teaser-out-puneeth-rajkumar-opens-up-glory-of-karnataka-wildlife-and-forest-890252.html" target="_blank">‘ಗಂಧದಗುಡಿ’ಯಲ್ಲಿ ಎದ್ದು ಬಂದ ಪುನೀತ್ ರಾಜ್ಕುಮಾರ್: ಅಪ್ಪು ಕನಸಿನ ಯೋಜನೆ ಅನಾವರಣ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವುದರಿಂದ ಕ್ರಿಸ್ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧಹೇರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p>ಕಳೆದ ಒಂದೇ ದಿನ ಕರ್ನಾಟಕದಲ್ಲಿ 456 ಕೋವಿಡ್ ಪ್ರಕರಣಗಳು ದೃಢಪಟ್ಟು, 6 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವಾರದಲ್ಲಿ ಸೋಂಕು ತಗುಲಿರುವುದು ಆತಂಕ ಹೆಚ್ಚುವಂತೆ ಮಾಡಿದೆ.</p>.<p>ಇನ್ನೊಂದೆಡೆ ಕೊರೊನಾವೈರಸ್ನ ರೂಪಾಂತರಿ ತಳಿಯಾದ ಓಮೈಕ್ರಾನ್ನ ಎರಡು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು ಈ ಸೋಂಕು ತಡೆಯಲು ಸರ್ಕಾರ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಸಾದ್ಯತೆ ಇದೆ ಎನ್ನಲಾಗಿದೆ</p>.<p>ಒಂದೇ ವಾರದಲ್ಲಿ ಕೊಡಗು, ಹಾವೇರಿ, ಧಾರವಾಡ, ದಾವಣಗೆರೆ, ಮಂಡ್ಯ, ಮೈಸೂರಲ್ಲಿ ಕೋವಿಡ್ ಪ್ರಕರಣಗಳು ದ್ವೀಗುಣಗೊಂಡಿವೆ. ಅಲ್ಲದೆ ಶಿವಮೊಗ್ಗ ಹಾಗೂ ಕೊಪ್ಪಳದಲ್ಲಿ ಒಂದೇ ದಿನದಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿವೆ.</p>.<p>ಕಳೆದ ನವೆಂಬರ್ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತೆ ಕೋವಿಡ್ ತಡೆಯಲು ಬಿಗಿ ನಿಯಂತ್ರಣಾ ಕ್ರಮಗಳು ಜಾರಿಯಾಗುವ ಮುನ್ಸೂಚನೆ ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:<a href="https://www.prajavani.net/entertainment/cinema/gandhada-gudi-teaser-out-puneeth-rajkumar-opens-up-glory-of-karnataka-wildlife-and-forest-890252.html" target="_blank">‘ಗಂಧದಗುಡಿ’ಯಲ್ಲಿ ಎದ್ದು ಬಂದ ಪುನೀತ್ ರಾಜ್ಕುಮಾರ್: ಅಪ್ಪು ಕನಸಿನ ಯೋಜನೆ ಅನಾವರಣ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>