2016ರ ಡಿಸೆಂಬರ್ 1ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ನಿಗದಿಪಡಿಸಿರುವ ನಿಯಮಗಳ ಪ್ರಕಾರ ಸಮೀಕ್ಷೆ ನಡೆಸಿಲ್ಲ ಎಂದು ಆರೋಪಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಅರ್ಜಿ ಸಲ್ಲಿಸಿತ್ತು. ‘ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಆಧರಿಸಿ ಸಮೀಕ್ಷೆ ನಡೆಸಬೇಕು. ಆದರೆ, ಸಮೀಕ್ಷೆಗೆ ಸಿದ್ಧಪಡಿಸಿದ್ದ ನಮೂನೆಯೇ ದೋಷಯುಕ್ತವಾಗಿತ್ತು. ಅದರ ಆಧಾರದಲ್ಲಿ ನಡೆಸಿರುವ ಸಮೀಕ್ಷೆಯಿಂದ ಯಾವ ಪ್ರಯೋಜನವೂ ಆಗದು’ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.