ಸೌಜನ್ಯಾ ಆಪ್ತ ಸಹಾಯಕ ಹಾಗೂ ನಟನೊಬ್ಬನ ವಿರುದ್ಧ ಅವರು ದೂರು ನೀಡಿದ್ದು, ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ಪ್ರಭು ಮಾದಪ್ಪ ' ಮಗಳು ಕಳೆದ ಐದು ವರ್ಷದಿಂದ ಬೆಂಗಳೂರಿನಲ್ಲಿದ್ದು, ಎರಡು ವರ್ಷದಿಂದ ಈ ಅಪಾರ್ಟ್ಮೆಂಟ್ನಲ್ಲಿ ಒಬ್ಬಳೇ ಇದ್ದಳು. ಕೆಲ ಕಾಲ ಗಗನಸಖಿಯಾಗಿಯೂ ಕೆಲಸ ಮಾಡಿದ್ದಳು. ಚೌಕಟ್ಟು, ಫನ್, ಅರ್ಜುನ್ ಗೌಡ ಚಿತ್ರಗಳಲ್ಲಿ ಆಕೆ ನಟಿಸಿದ್ದಳು. ಬೆಳಿಗ್ಗೆಯಷ್ಟೇ ಮೊಬೈಲ್ ಕರೆ ಮಾಡಿ, ಕೊಡಗಿಗೆ ಬರುವುದಾಗಿ ಹೇಳಿದ್ದಳು. ಯಾರೋ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು' ಎಂದು ಆಗ್ರಹಿಸಿದರು.