ಸ್ವಾಮಿ ವಿವೇಕಾನಂದರ ಪುಣ್ಯತಿಥಿ: ಚಿಂತನ ವರ್ಗದಲ್ಲಿ ಬಿಎಸ್ವೈ ಭಾಗಿ

ಬೆಂಗಳೂರು: ಸ್ವಾಮಿ ವಿವೇಕಾನಂದ ಅವರ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಚಿಂತನ ವರ್ಗ ಬೈಠಕ್ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚ್ಯುಯಲ್ ಆಗಿ ಭಾಗವಹಿಸಿದರು.
ತಮ್ಮ ಅಧಿಕೃತ ನಿವಾಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಆರ್ಎಸ್ಎಸ್ ಪ್ರಮುಖರ ಮಾತುಗಳನ್ನು ಆಲಿಸಿದರು.
ಇದಕ್ಕೂ ಮೊದಲು, ತಮ್ಮ ನಿವಾಸದಲ್ಲೇ ವಿವೇಕಾನಂದರ ಪುಣ್ಯತಿಥಿ ಆಚರಿಸಿದ ಮುಖ್ಯಮಂತ್ರಿ, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.