ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಥಮ ಬಾರಿಗೆ ಲಿಂಗಾಯತ ಸಮಾಜದ ಪೀಠದಿಂದ ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಮಾಜದ ಜನಪ್ರತಿನಿಧಿಗಳು ರಾಜೀನಾಮೆ ನೀಡುವ ಬದಲು, ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವ ಮೂಲಕ ಮೀಸಲಾತಿ ಪಡೆಯಬೇಕು. ಇಲ್ಲವಾದಲ್ಲಿ ಅವರ ರಾಜೀನಾಮೆ ಪಡೆದು, ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಪಟ್ಟಕಟ್ಟಬೇಕು’ ಎಂದು ಕರೆ ನೀಡಿದರು.