‘ಧಾರವಾಡ ಜಿಲ್ಲೆಯಲ್ಲಿ ಅಂದಾಜು 4.7 ಹೆಕ್ಟೇರ್, ಬೆಳಗಾವಿ ಜಿಲ್ಲೆಯಲ್ಲಿ 101 ಹೆಕ್ಟೇರ್, ಉತ್ತರ ಕನ್ನಡ ಜಿಲ್ಲೆಯಲ್ಲಿ 70 ಹೆಕ್ಟೇರ್ ಸೇರಿ 177 ಹೆಕ್ಟೇರ್ ಅರಣ್ಯ ಪ್ರದೇಶ ಪರಿವರ್ತನೆಗೆ ಕೋರಲಾಗಿದೆ. ಬಹುಪಾಲು ಜಾಗ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿದೆ. ದಾಂಡೇಲಿಯ ಆನೆಧಾಮ, ಭೀಮಗಢ ಅಭಯಾರಣ್ಯ, ಕಾಳಿ ಹುಲಿ ಸಂರಕ್ಷಿತ ಪ್ರದೇಶ, ದಾಂಡೇಲಿ ಅಭಯಾರಣ್ಯದ ಮೂಲಕ ಈ ಮಾರ್ಗ ಹಾದು ಹೋಗಲಿದೆ. ಆನೆ, ಹುಲಿ, ಚಿರತೆ, ಕೆನ್ನಾಯಿ, ಕಾಳಂಗಿ ಸರ್ಪ, ಮಂಗಟ್ಟೆ (ಹಾರ್ನ್ಬಿಲ್) ಸೇರಿ ಇನ್ನೂ ಅಳಿವಿನಂಚಿನಲ್ಲಿರುವ ಅನೇಕ ವನ್ಯಜೀವಿಗಳ ಆಶ್ರಯ ತಾಣ ಇದಾಗಿದೆ’ ಎಂದು ಅವರು ಹೇಳಿದ್ದಾರೆ.