ನಡುಗಡ್ಡೆಯಲ್ಲೇ ಕೃಷಿ ಜಮೀನುಗಳಿದ್ದು, ಅಲ್ಲಿಯೇ ಕೆಲವು ಕುಟುಂಬಗಳು ವಾಸಿಸುತ್ತಿವೆ. ಪ್ರತಿವರ್ಷ ಪ್ರವಾಹ ಬಂದಾಗೊಮ್ಮೆ ಅಧಿಕಾರಿಗಳು ಮನವೊಲಿಸಿ ನಡುಗಡ್ಡೆಯಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಕರೆತರುವುದು ವಾಡಿಕೆಯಾಗಿದೆ. ನಡುಗಡ್ಡೆ ಹೊರಗಡೆ ಕೃಷಿ ಜಮೀನು ಹಾಗೂ ಮನೆಗಳನ್ನು ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎನ್ನುವುದು ಅಲ್ಲಿರುವ ಜನರ ಬೇಡಿಕೆಯಾಗಿದ್ದು, ಇದುವರೆಗೂ ಈಡೇರಿಲ್ಲ. ಅಧಿಕಾರಿಗಳು ಭರವಸೆ ನೀಡುತ್ತಾ ಬಂದಿದ್ದಾರೆ.