<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ): </strong>ತಾಲ್ಲೂಕಿನ ಕೃಷ್ಣಾನದಿಯ ಕರಕಲಗಡ್ಡಿ ನಡುಗಡ್ಡೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ‘ಡ್ರೋಣ್’ ಮೂಲಕ ಔಷಧಿಗಳನ್ನು ತಲುಪಿಸಲಾಯಿತು.</p>.<p>ಕರಕಲಗಡ್ಡಿಯಲ್ಲಿ ಒಂದೇ ಕುಟುಂಬದ ನಾಲ್ವರು ಉಳಿದುಕೊಂಡಿದ್ದು, ಅವರಲ್ಲಿ ತಿಪ್ಪಣ್ಣ ಎಂಬುವರು ಪಾರ್ಶ್ವವಾಯು ಪೀಡಿತರು. ಅವರು ತೆಗೆದುಕೊಳ್ಳುತ್ತಿದ್ದ ಔಷಧಿ ಖಾಲಿಯಾಗಿದ್ದರಿಂದ ಅವುಗಳನ್ನು ಕಳುಹಿಸುವ ವ್ಯವಸ್ಥೆ ಮಾಡುವಂತೆ ಉಪವಿಭಾಗಾಧಿಕಾರಿ ರಾಜಶೇಖರ ಡಂಬಾಳ ಅವರಿಗೆ ನಡುಗಡ್ಡೆ ಜನರು ಕೋರಿದ್ದರು.</p>.<p>‘ನಾರಾಯಣಪುರ ಜಲಾಶಯದಿಂದ 2.72 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗಿದ್ದು, ನಡುಗಡ್ಡೆಗೆ ಬೋಟ್ನಲ್ಲಿ ಹೋಗುವುದು ಅಪಾಯಕಾರಿ’ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದರು.</p>.<p>ಹಾಗಾಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರುರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಅವರಿಗೆ ‘ಡ್ರೋಣ್’ ಬಳಕೆಗೆ ಸಹಕರಿಸಲು ಕೋರಿದರು. ಕೃಷಿ ತಾಂತ್ರಿಕ ಕಾಲೇಜಿನ ಡೀನ್ ವೀರನಗೌಡ, ಸಹಾಯಕ ಪ್ರಾಧ್ಯಾಪಕರಾದ ಅಭಿಷೇಕ್, ಸುನೀಲ್ ಶಿರವಾಳ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಡ್ರೋಣ್ ಕಾರ್ಯಾಚರಣೆ ನಡೆಸಿದರು.</p>.<p>ಪ್ರವಾಹದಿಂದ ಕರಕಲಗಡ್ಡಿ ಮತ್ತು ಮ್ಯಾದರಗಡ್ಡಿ ಎರಡುನಡುಗಡ್ಡೆಗಳಿಗೆ ಸಂಪರ್ಕ ಕಡಿತವಾಗಿದೆ. ಮ್ಯಾದರಗಡ್ಡಿಯಲ್ಲಿದ್ದ 13 ಪೈಕಿ 4 ಜನರನ್ನು ಸುರಕ್ಷಿತ ಜಾಗಕ್ಕೆ ಮೂರು ದಿನಗಳ ಹಿಂದೆಯೇ ಸ್ಥಳಾಂತರಿಸಲಾಗಿದೆ. ಡ್ರೋಣ್ ಮೂಲಕ ನಡುಗಡ್ಡೆ ಜನರಿಗೆ ಮಾತ್ರೆಗಳನ್ನು ತಲುಪಿಸುವ ವಿಡಿಯೋ ವೈರಲ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ): </strong>ತಾಲ್ಲೂಕಿನ ಕೃಷ್ಣಾನದಿಯ ಕರಕಲಗಡ್ಡಿ ನಡುಗಡ್ಡೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ‘ಡ್ರೋಣ್’ ಮೂಲಕ ಔಷಧಿಗಳನ್ನು ತಲುಪಿಸಲಾಯಿತು.</p>.<p>ಕರಕಲಗಡ್ಡಿಯಲ್ಲಿ ಒಂದೇ ಕುಟುಂಬದ ನಾಲ್ವರು ಉಳಿದುಕೊಂಡಿದ್ದು, ಅವರಲ್ಲಿ ತಿಪ್ಪಣ್ಣ ಎಂಬುವರು ಪಾರ್ಶ್ವವಾಯು ಪೀಡಿತರು. ಅವರು ತೆಗೆದುಕೊಳ್ಳುತ್ತಿದ್ದ ಔಷಧಿ ಖಾಲಿಯಾಗಿದ್ದರಿಂದ ಅವುಗಳನ್ನು ಕಳುಹಿಸುವ ವ್ಯವಸ್ಥೆ ಮಾಡುವಂತೆ ಉಪವಿಭಾಗಾಧಿಕಾರಿ ರಾಜಶೇಖರ ಡಂಬಾಳ ಅವರಿಗೆ ನಡುಗಡ್ಡೆ ಜನರು ಕೋರಿದ್ದರು.</p>.<p>‘ನಾರಾಯಣಪುರ ಜಲಾಶಯದಿಂದ 2.72 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗಿದ್ದು, ನಡುಗಡ್ಡೆಗೆ ಬೋಟ್ನಲ್ಲಿ ಹೋಗುವುದು ಅಪಾಯಕಾರಿ’ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದರು.</p>.<p>ಹಾಗಾಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರುರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಅವರಿಗೆ ‘ಡ್ರೋಣ್’ ಬಳಕೆಗೆ ಸಹಕರಿಸಲು ಕೋರಿದರು. ಕೃಷಿ ತಾಂತ್ರಿಕ ಕಾಲೇಜಿನ ಡೀನ್ ವೀರನಗೌಡ, ಸಹಾಯಕ ಪ್ರಾಧ್ಯಾಪಕರಾದ ಅಭಿಷೇಕ್, ಸುನೀಲ್ ಶಿರವಾಳ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಡ್ರೋಣ್ ಕಾರ್ಯಾಚರಣೆ ನಡೆಸಿದರು.</p>.<p>ಪ್ರವಾಹದಿಂದ ಕರಕಲಗಡ್ಡಿ ಮತ್ತು ಮ್ಯಾದರಗಡ್ಡಿ ಎರಡುನಡುಗಡ್ಡೆಗಳಿಗೆ ಸಂಪರ್ಕ ಕಡಿತವಾಗಿದೆ. ಮ್ಯಾದರಗಡ್ಡಿಯಲ್ಲಿದ್ದ 13 ಪೈಕಿ 4 ಜನರನ್ನು ಸುರಕ್ಷಿತ ಜಾಗಕ್ಕೆ ಮೂರು ದಿನಗಳ ಹಿಂದೆಯೇ ಸ್ಥಳಾಂತರಿಸಲಾಗಿದೆ. ಡ್ರೋಣ್ ಮೂಲಕ ನಡುಗಡ್ಡೆ ಜನರಿಗೆ ಮಾತ್ರೆಗಳನ್ನು ತಲುಪಿಸುವ ವಿಡಿಯೋ ವೈರಲ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>