‘ನಿತ್ಯವೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯ ಸರ್ಕಾರಚಿಕಿತ್ಸಾ ಶುಲ್ಕ ನಿಗದಿ ಮಾಡಿದ್ದರೂ ಖಾಸಗಿ ಆಸ್ಪತ್ರೆಗಳು ಅದನ್ನು ಪಾಲಿಸುತ್ತಿಲ್ಲ. ಕೆಲವು ಆಸ್ಪತ್ರೆಗಳು ಜನರನ್ನು ಸುಲಿಗೆ ಮಾಡುತ್ತಿವೆ. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರಿಂದ ₹ 1.5 ಲಕ್ಷ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರಿಂದ ₹ 6.5 ಶುಲ್ಕ ಪಡೆದಿರುವ ವಿಷಯ ವಿಧಾನಸಭೆಯಲ್ಲೇ ಪ್ರಸ್ತಾಪವಾಗಿದೆ. ಶಾಸಕರ ಗತಿಯೇ ಹೀಗಾದರೆ ಜನಸಾಮಾನ್ಯರ ಪಾಡೇನು’ ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.