<p><strong>ಬೆಂಗಳೂರು</strong>: ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಸಾಮಾಜಿಕ ಕಾಳಜಿಯ ಯೋಜನೆಗಳನ್ನು ಮುಂದುವರಿಸುವ ಪ್ರಯತ್ನ ಸಾಗಿದೆ.</p>.<p>ಪುನೀತ್ ರಾಜ್ಕುಮಾರ್ ಅವರು ಶಿಕ್ಷಣದ ವೆಚ್ಚ ಭರಿಸುತ್ತಿದ್ದ 1,800 ಮಕ್ಕಳ ಮುಂದಿನ ವಿದ್ಯಾಭ್ಯಾಸದ ಹೊಣೆಯನ್ನು ತಮಿಳು ಚಿತ್ರರಂಗದ ನಾಯಕ ನಟ ವಿಶಾಲ್ ವಹಿಸಿಕೊಂಡಿದ್ದಾರೆ.</p>.<p>ತಮ್ಮ ನಟನೆಯ ‘ಎನಿಮಿ’ ಚಿತ್ರದ ಬಿಡುಗಡೆ ಪೂರ್ವ ಸಮಾರಂಭದಲ್ಲಿ ಪುನೀತ್ಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಮುಂದಿನ ವರ್ಷದಿಂದ ಆ ಬಡ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ಹೊಣೆಯನ್ನು ನಾನು ವಹಿಸಿಕೊಳ್ಳುತ್ತೇನೆ. ಇದು ನನ್ನ (ವಿಶಾಲ್) ಮತ್ತು ಪುನೀತ್ ನಡುವಿನ ಸ್ನೇಹ ಸಂಬಂಧಕ್ಕೆ ಕೊಡುತ್ತಿರುವ ಗೌರವ’ ಎಂದಿದ್ದಾರೆ.</p>.<p>ವಿಶಾಲ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.</p>.<p><strong>ಶೀಘ್ರ ತೆರೆಯಲ್ಲಿ ಪುನೀತ್!:</strong> ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯದ ಭಾಗಗಳ ಚಿತ್ರೀಕರಣ ಪೂರ್ಣಗೊಂಡಿದೆ. ಒಂದು ಹಾಡು ಮಾತ್ರ ಬಾಕಿ ಇತ್ತು. ಕೆಲ ದಿನಗಳಲ್ಲಿ ಅಭಿಮಾನಿಗಳು ತಮ್ಮ ‘ದೇವರನ್ನು’ (ಪುನೀತ್) ತೆರೆಯ ಮೇಲೆ ನೋಡಬಹುದು ಎಂದು ಚಿತ್ರದ ನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ.</p>.<p><strong>ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ</strong></p>.<p>ಚಿತ್ರನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ ನೀಡಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸುತ್ತಿರುವ ಕುರಿತು ಪ್ರಮುಖರ ಜತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಪುನೀತ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಹೆಚ್ಚುತ್ತಿರುವ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಈ ಬೇಡಿಕೆ ಕುರಿತು ತಕ್ಷಣದಲ್ಲೇ ಏನನ್ನೂ ಹೇಳಲಾಗದು. ಪ್ರಮುಖರ ಜತೆ ಚರ್ಚಿಸುತ್ತೇನೆ’ ಎಂದರು.</p>.<p>ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಪೊಲೀಸರು ಕನ್ನಡದಲ್ಲೇ ಕವಾಯತು ನಡೆಸುವುದಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗುವುದು. ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಬೆಳಗಾವಿಯಲ್ಲಿದ್ದಾಗ ಕನ್ನಡ ಕವಾಯತು ವ್ಯವಸ್ಥೆ ಮಾಡಿದ್ದರು. ಈಗ ಅದನ್ನು ರಾಜ್ಯದಾದ್ಯಂತ ಜಾರಿಗೆ ತರಲು ಗೃಹ ಸಚಿವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಸಾಮಾಜಿಕ ಕಾಳಜಿಯ ಯೋಜನೆಗಳನ್ನು ಮುಂದುವರಿಸುವ ಪ್ರಯತ್ನ ಸಾಗಿದೆ.</p>.<p>ಪುನೀತ್ ರಾಜ್ಕುಮಾರ್ ಅವರು ಶಿಕ್ಷಣದ ವೆಚ್ಚ ಭರಿಸುತ್ತಿದ್ದ 1,800 ಮಕ್ಕಳ ಮುಂದಿನ ವಿದ್ಯಾಭ್ಯಾಸದ ಹೊಣೆಯನ್ನು ತಮಿಳು ಚಿತ್ರರಂಗದ ನಾಯಕ ನಟ ವಿಶಾಲ್ ವಹಿಸಿಕೊಂಡಿದ್ದಾರೆ.</p>.<p>ತಮ್ಮ ನಟನೆಯ ‘ಎನಿಮಿ’ ಚಿತ್ರದ ಬಿಡುಗಡೆ ಪೂರ್ವ ಸಮಾರಂಭದಲ್ಲಿ ಪುನೀತ್ಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಮುಂದಿನ ವರ್ಷದಿಂದ ಆ ಬಡ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ಹೊಣೆಯನ್ನು ನಾನು ವಹಿಸಿಕೊಳ್ಳುತ್ತೇನೆ. ಇದು ನನ್ನ (ವಿಶಾಲ್) ಮತ್ತು ಪುನೀತ್ ನಡುವಿನ ಸ್ನೇಹ ಸಂಬಂಧಕ್ಕೆ ಕೊಡುತ್ತಿರುವ ಗೌರವ’ ಎಂದಿದ್ದಾರೆ.</p>.<p>ವಿಶಾಲ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.</p>.<p><strong>ಶೀಘ್ರ ತೆರೆಯಲ್ಲಿ ಪುನೀತ್!:</strong> ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯದ ಭಾಗಗಳ ಚಿತ್ರೀಕರಣ ಪೂರ್ಣಗೊಂಡಿದೆ. ಒಂದು ಹಾಡು ಮಾತ್ರ ಬಾಕಿ ಇತ್ತು. ಕೆಲ ದಿನಗಳಲ್ಲಿ ಅಭಿಮಾನಿಗಳು ತಮ್ಮ ‘ದೇವರನ್ನು’ (ಪುನೀತ್) ತೆರೆಯ ಮೇಲೆ ನೋಡಬಹುದು ಎಂದು ಚಿತ್ರದ ನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ.</p>.<p><strong>ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ</strong></p>.<p>ಚಿತ್ರನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಗೌರವ ನೀಡಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸುತ್ತಿರುವ ಕುರಿತು ಪ್ರಮುಖರ ಜತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಪುನೀತ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಹೆಚ್ಚುತ್ತಿರುವ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಈ ಬೇಡಿಕೆ ಕುರಿತು ತಕ್ಷಣದಲ್ಲೇ ಏನನ್ನೂ ಹೇಳಲಾಗದು. ಪ್ರಮುಖರ ಜತೆ ಚರ್ಚಿಸುತ್ತೇನೆ’ ಎಂದರು.</p>.<p>ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಪೊಲೀಸರು ಕನ್ನಡದಲ್ಲೇ ಕವಾಯತು ನಡೆಸುವುದಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗುವುದು. ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಬೆಳಗಾವಿಯಲ್ಲಿದ್ದಾಗ ಕನ್ನಡ ಕವಾಯತು ವ್ಯವಸ್ಥೆ ಮಾಡಿದ್ದರು. ಈಗ ಅದನ್ನು ರಾಜ್ಯದಾದ್ಯಂತ ಜಾರಿಗೆ ತರಲು ಗೃಹ ಸಚಿವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>