ಮಠದ ಐಕ್ಯಮಂಟಪದಲ್ಲಿ ಗುರುವಾರ ಬೆಳಗ್ಗೆ 5 ಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಕಂಚಿನ ಪುತ್ಥಳಿಗೆ ಅಭಿಷೇಕ ನೆರವೇರಿತು. ಗುರುಕುಲದ ವಿದ್ಯಾರ್ಥಿಗಳು ವಚನಗೀತೆ ಹಾಡುವ ಮೂಲಕ ಪೂಜಾ ಕೈಂಕರ್ಯ ಪೂರ್ಣಗೊಳಿಸಿದರು.ಐಕ್ಯಮಂಟಪ ಬಾಳೆಕಂದು, ಮಾವಿನ ತೋರಣ ಮತ್ತು ತರಹೇವಾರಿ ಪುಷ್ಪಗಳಿಂದ ಕಂಗೊಳಿಸುತ್ತಿತ್ತು. ಭಕ್ತರ ಸುಳಿವಿಲ್ಲದೇ ಪ್ರಶಾಂತತೆ ಕಾಣುತ್ತಿತ್ತು.