<p><strong>ಬೆಂಗಳೂರು: </strong>‘ತೌಕ್ತೆ’ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮೇ 20ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>‘ಚಂಡಮಾರುತ ಪ್ರಸ್ತುತ ಪೂರ್ವ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿದೆ. ಇದು, ಇನ್ನಷ್ಟು ತೀವ್ರಗೊಂಡು ಉತ್ತರ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆಗಳಿವೆ. ಮೇ 18ರಂದು ಗುಜರಾತ್ ಕರಾವಳಿಯಿಂದ ತೀವ್ರಗೊಳ್ಳಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.</p>.<p>‘ಚಂಡಮಾರುತದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಅಲ್ಲದೆ, ಒಳನಾಡಿನಲ್ಲೂ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 16ರಂದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಸಮಯದಲ್ಲಿ ಗರಿಷ್ಠ 20 ಸೆಂ.ಮೀ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ವಿವರಿಸಿದರು.</p>.<p><strong>ಎಲ್ಲೆಲ್ಲಿ ಅಲರ್ಟ್: </strong>ಮೇ 17ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಹಾವೇರಿ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮಂಡ್ಯ, ಮೈಸೂರಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.</p>.<p>ಕರಾವಳಿಯಲ್ಲಿ ಚಂಡಮಾರುತ ತೀವ್ರತೆ ಇರುವುದರಿಂದ ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಮುಂದಿನ ಐದೂ ದಿನ ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.</p>.<p><strong>ಮಳೆ–ಎಲ್ಲಿ,ಎಷ್ಟು?:</strong> ಮಂಗಳೂರಿನಲ್ಲಿ ಶನಿವಾರ ಗರಿಷ್ಠ 8 ಸೆಂ.ಮೀ ಮಳೆಯಾಗಿದೆ. ಸುಳ್ಯ 5, ಭಾಗಮಂಡಲ 4, ಮೂಡುಬಿದರೆ, ಪುತ್ತೂರು, ಕಾರ್ಕಳ, ವಿರಾಜಪೇಟೆ 3, ಧರ್ಮಸ್ಥಳ, ಸುಬ್ರಹ್ಮಣ್ಯ, ಮಡಿಕೇರಿ, ಹಾಸನ 2, ಬೆಳ್ತಂಗಡಿ, ಕುಂದಾಪುರ, ಅಂಕೋಲಾ ಹಾಗೂ ಕಾರವಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ತೌಕ್ತೆ’ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮೇ 20ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>‘ಚಂಡಮಾರುತ ಪ್ರಸ್ತುತ ಪೂರ್ವ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿದೆ. ಇದು, ಇನ್ನಷ್ಟು ತೀವ್ರಗೊಂಡು ಉತ್ತರ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆಗಳಿವೆ. ಮೇ 18ರಂದು ಗುಜರಾತ್ ಕರಾವಳಿಯಿಂದ ತೀವ್ರಗೊಳ್ಳಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.</p>.<p>‘ಚಂಡಮಾರುತದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಅಲ್ಲದೆ, ಒಳನಾಡಿನಲ್ಲೂ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 16ರಂದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಸಮಯದಲ್ಲಿ ಗರಿಷ್ಠ 20 ಸೆಂ.ಮೀ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ವಿವರಿಸಿದರು.</p>.<p><strong>ಎಲ್ಲೆಲ್ಲಿ ಅಲರ್ಟ್: </strong>ಮೇ 17ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಹಾವೇರಿ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮಂಡ್ಯ, ಮೈಸೂರಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.</p>.<p>ಕರಾವಳಿಯಲ್ಲಿ ಚಂಡಮಾರುತ ತೀವ್ರತೆ ಇರುವುದರಿಂದ ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಮುಂದಿನ ಐದೂ ದಿನ ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.</p>.<p><strong>ಮಳೆ–ಎಲ್ಲಿ,ಎಷ್ಟು?:</strong> ಮಂಗಳೂರಿನಲ್ಲಿ ಶನಿವಾರ ಗರಿಷ್ಠ 8 ಸೆಂ.ಮೀ ಮಳೆಯಾಗಿದೆ. ಸುಳ್ಯ 5, ಭಾಗಮಂಡಲ 4, ಮೂಡುಬಿದರೆ, ಪುತ್ತೂರು, ಕಾರ್ಕಳ, ವಿರಾಜಪೇಟೆ 3, ಧರ್ಮಸ್ಥಳ, ಸುಬ್ರಹ್ಮಣ್ಯ, ಮಡಿಕೇರಿ, ಹಾಸನ 2, ಬೆಳ್ತಂಗಡಿ, ಕುಂದಾಪುರ, ಅಂಕೋಲಾ ಹಾಗೂ ಕಾರವಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>