ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ಗೆಹ್ಲೋಟ್ ಅವರನ್ನು ನೇಮಕ ಮಾಡಲು ನಿರ್ಧರಿಸಿದ್ದು ಸದ್ಯದಲ್ಲೇ ಆದೇಶ ಹೊರಬೀಳಲಿದೆ. ಕೇಂದ್ರ ಸಂಪುಟ ಪುನರ್ರಚನೆ ವೇಳೆ ಗೆಹ್ಲೋಟ್ ಅವರನ್ನು ಕೈಬಿಡಲಿದ್ದು, ಅವರಿಗೆ ರಾಜ್ಯಪಾಲ ಹುದ್ದೆ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.