ಹುಬ್ಬಳ್ಳಿ: ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬುವನಿಂದ ತೀವ್ರ ಹಲ್ಲೆಗೊಳಗಾಗಿ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ, ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿ ಗೀತಾ ಬಾರಕೇರ (34) ಗುರುವಾರ ಮೃತಪಟ್ಟಿದ್ದಾರೆ.
‘ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಗೀತಾ ಅವರನ್ನು ಮೂರು ದಿನಗಳ ಹಿಂದೆ ಕಿಮ್ಸ್ಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು’ ಎಂದು ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಸಿ. ತಿಳಿಸಿದರು.