ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂತ್ರಸ್ತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಜುಂಜವಾಡಿ ನಿವಾಸಿ ಬಸವರಾಜೇಂದ್ರ ಪೊಲೀಸರ ವಶದಲ್ಲಿರುವ ಆರೋಪಿ. ಇವರು ಮಠದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.
ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಬುಧವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಮಠದ ಉದ್ಯೋಗಿ ಗಾಯತ್ರಿ ಹಾಗೂ ಒಡನಾಡಿ ಸೇವಾ ಸಂಸ್ಥೆ ವಿರುದ್ಧವೂ ದೂರು ದಾಖಲಾಗಿದೆ.