ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ನಾಲ್ಕೂ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಬಿಜೆಪಿಯವರು ಜಂಭ ಕೊಚ್ಚಿಕೊಳ್ಳುತ್ತಿದ್ದರು. ಹಳೆ ಮೈಸೂರು ಭಾಗದಲ್ಲಿ ನಮ್ಮದೇ ಪ್ರಾಬಲ್ಯ ಎಂದು ಜೆಡಿಎಸ್ನವರು ಹೇಳುತ್ತಿದ್ದರು. ಎಲ್ಲವೂ ಈಗ ಸುಳ್ಳಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಜನರು ಸಜ್ಜಾಗಿರುವುದು ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ’ ಎಂದರು.