ಸಂಘಟನೆಯ ಅಧ್ಯಕ್ಷ ವಿ.ಎನ್. ರಾಜಶೇಖರ್ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗ, ಎಲ್ಲ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರಿಗೆ ಶೇ 100 ವೇತನ, ಕೋವಿಡ್ ಕಾರಣ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್, ಕೆಲಸ ಕಳೆದುಕೊಂಡ ಉಪನ್ಯಾಸಕರಿಗೆ ಸರ್ಕಾರ ತಕ್ಷಣ ಮತ್ತೊಂದು ಉದ್ಯೋಗ ಸೃಷ್ಟಿಸುವಂತೆ ಅಧಿವೇಶನದಲ್ಲಿ ಒತ್ತಾಯಿಸಬೇಕು ಎಂದೂ ಕೋರಿದೆ.