ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವರ್ಗಾವಣೆ: ಸಂಪುಟ ಸಭೆಗೆ ‘ಸುಗ್ರೀವಾಜ್ಞೆ’ ಪ್ರಸ್ತಾವ

Last Updated 24 ಏಪ್ರಿಲ್ 2021, 20:58 IST
ಅಕ್ಷರ ಗಾತ್ರ

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ ತಿದ್ದುಪಡಿ ತಂದು, 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮೊದಲು ಕೌನ್ಸೆಲಿಂಗ್‌ನಡೆಸಿ ವರ್ಗಾವಣೆಯಲ್ಲಿ ಆದ್ಯತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸೋಮವಾರ ನಡೆಯಲಿರುವ (ಏ. 26) ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವ ಮಂಡನೆಯಾಗಲಿದೆ. ಸುಗ್ರೀವಾಜ್ಞೆಗೆ ಸಂಪುಟ ಸಭೆಯ ಅನುಮೋದನೆ ಬಳಿಕ, ರಾಜ್ಯಪಾಲರ ಅಂಕಿತ ಪಡೆದು ತಕ್ಷಣದಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

2020–21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಸಂದರ್ಭದಲ್ಲಿ 2019–20ರ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ‘ಶಿಕ್ಷೆ’ಗೆ ಒಳಗಾದ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡುವ ಪ್ರಸ್ತಾವ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ಯಲ್ಲಿ ಆಗಿರಲಿಲ್ಲ. ಆದರೆ, ಕಳೆದ ನ. 11ರಂದು ಹೊರಡಿಸಿರುವ ವರ್ಗಾವಣೆ ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರ ಈ ಅವಕಾಶ ಕಲ್ಪಿಸಿತ್ತು. ಆದರೆ ಅದಕ್ಕೆ ಕೆಎಟಿ ಮತ್ತು ಹೈಕೋರ್ಟ್‌ ತಡೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT