<p><strong>ಬೆಂಗಳೂರು:</strong> ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯ(ಎಸ್ಡಿಆರ್ಎಫ್) ಅನುದಾನ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ತಾಂತ್ರಿಕ ಮೌಲ್ಯಮಾಪನ ಸಮಿತಿ ಮತ್ತು ಯೋಜನಾ ಮೌಲ್ಯಮಾಪನ ಸಮಿತಿಗಳನ್ನು ರಚಿಸಿದೆ.</p>.<p>ತಾಂತ್ರಿಕ ಮೌಲ್ಯಮಾಪನ ಸಮಿತಿಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.</p>.<p>ಈ ಸಮಿತಿಗೆ ಡಾ.ಜಿ.ಶ್ರೀನಿವಾಸರಾವ್– ಉಪನಿರ್ದೇಶಕರು (ವಿಪತ್ತು ನಿರ್ವಹಣೆ) ಇಸ್ರೊ, ಡಾ.ಪಿ.ಪ್ರದೀಪ್ ಮುಜುಂದಾರ್– ಭಾರತೀಯ ವಿಜ್ಞಾನ ಸಂಸ್ಥೆ, ಡಾ.ವೈ.ಎಸ್.ಷಡಕ್ಷರಿ– ನಿರ್ದೇಶಕರು, (ರೀಸರ್ಚ್) ಯುಎಎಸ್ಬಿ, ಡಾ.ಜಯಚಂದ್ರ– ಕೆಎಸ್ಆರ್ಎಸಿ, ಐಸೆಕ್ನ ನಿರ್ದೇಶಕರು ಮತ್ತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಉಪಕಾರ್ಯದರ್ಶಿ ಪದನಿಮಿತ್ತ ಸದಸ್ಯರಾಗಿರುತ್ತಾರೆ.</p>.<p>ಯೋಜನಾ ಮೌಲ್ಯ ಮಾಪನ ಸಮಿತಿಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ/ ಅಭಿವೃದ್ಧಿ ಆಯುಕ್ತರು ಅಧ್ಯಕ್ಷರಾಗಿರುತ್ತಾರೆ. ಸದಸ್ಯರನ್ನಾಗಿ ಹಣಕಾಸು ಇಲಾಖೆ, ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಮತ್ತು ಕೃಷಿ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಆಯುಕ್ತರನ್ನು ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯ(ಎಸ್ಡಿಆರ್ಎಫ್) ಅನುದಾನ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ತಾಂತ್ರಿಕ ಮೌಲ್ಯಮಾಪನ ಸಮಿತಿ ಮತ್ತು ಯೋಜನಾ ಮೌಲ್ಯಮಾಪನ ಸಮಿತಿಗಳನ್ನು ರಚಿಸಿದೆ.</p>.<p>ತಾಂತ್ರಿಕ ಮೌಲ್ಯಮಾಪನ ಸಮಿತಿಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.</p>.<p>ಈ ಸಮಿತಿಗೆ ಡಾ.ಜಿ.ಶ್ರೀನಿವಾಸರಾವ್– ಉಪನಿರ್ದೇಶಕರು (ವಿಪತ್ತು ನಿರ್ವಹಣೆ) ಇಸ್ರೊ, ಡಾ.ಪಿ.ಪ್ರದೀಪ್ ಮುಜುಂದಾರ್– ಭಾರತೀಯ ವಿಜ್ಞಾನ ಸಂಸ್ಥೆ, ಡಾ.ವೈ.ಎಸ್.ಷಡಕ್ಷರಿ– ನಿರ್ದೇಶಕರು, (ರೀಸರ್ಚ್) ಯುಎಎಸ್ಬಿ, ಡಾ.ಜಯಚಂದ್ರ– ಕೆಎಸ್ಆರ್ಎಸಿ, ಐಸೆಕ್ನ ನಿರ್ದೇಶಕರು ಮತ್ತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಉಪಕಾರ್ಯದರ್ಶಿ ಪದನಿಮಿತ್ತ ಸದಸ್ಯರಾಗಿರುತ್ತಾರೆ.</p>.<p>ಯೋಜನಾ ಮೌಲ್ಯ ಮಾಪನ ಸಮಿತಿಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ/ ಅಭಿವೃದ್ಧಿ ಆಯುಕ್ತರು ಅಧ್ಯಕ್ಷರಾಗಿರುತ್ತಾರೆ. ಸದಸ್ಯರನ್ನಾಗಿ ಹಣಕಾಸು ಇಲಾಖೆ, ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಮತ್ತು ಕೃಷಿ ಇಲಾಖೆಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಆಯುಕ್ತರನ್ನು ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>