ವಿಶೇಷವಾಗಿ ಸೈಬರ್ ಕ್ರೈಂ, ಹ್ಯಾಕರ್ಸ್, ಡಾರ್ಕ್ ನೆಟ್ ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಸರ್ಕಾರ ಇಲಾಖೆಗಳ ವೆಬ್ಸೈಟ್ಗಳನ್ನು ಹ್ಯಾಕ್ ಮಾಡಲಾಗುತ್ತಿದೆ. ಇದನ್ನು ತಡೆಯಲು ಆಧುನಿಕ ತಂತ್ರಜ್ಞಾನ ಹೊಂದುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದರು. ‘ಕರ್ನಾಟಕ ಪೊಲೀಸರು ದಕ್ಷತೆ, ಪ್ರಾಮಾಣಿಕತೆ ಮತ್ತು ಕಾರ್ಯಕ್ಷಮತೆಗೆ ದೇಶದಲ್ಲೇ ಹೆಸರುವಾಸಿ ಈ ಹೆಮ್ಮೆಯನ್ನು ಕಾಪಾಡಿಕೊಂಡು ಹೋಗಬೇಕು. ಪ್ರತಿ ದಿನವೂ ಸವಾಲುಗಳು.ಯಾವ ಸಂದರ್ಭದಲ್ಲಿ ಏನು ನಡೆಯುತ್ತದೆ ಎಂಬುದನ್ನು ಹೇಳಲು ಆಗುವುದಿಲ್ಲ. ಯಾವುದೇ ಸನ್ನಿವೇಶ ಎದುರಾದರೂ ಸನ್ನದ್ಧರಾಗಿಬೇಕು. ನಮ್ಮ ಸರ್ಕಾರ ಹಿಂದಿನ ಯಾವುದೇ ಸರ್ಕಾರ ನೀಡದಷ್ಟು ಸೌಲಭ್ಯಗಳನ್ನು ನೀಡಿದೆ. ಸರ್ಕಾರಕ್ಕೆ ಹೆಮ್ಮೆ ತರುವ ಕೆಲಸ ಮಾಡಬೇಕು’ ಎಂದು ಹೇಳಿದರು.