<p><strong>ಬೆಂಗಳೂರು:</strong> ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರೇವಂತ್ ರೆಡ್ಡಿ, ಆ ರಾಜ್ಯದ ವಿರೋಧ ಪಕ್ಷದ ನಾಯಕ ರಘುವೀರ ರೆಡ್ಡಿ ಸೋಮವಾರ ಭೇಟಿಯಾಗಿದ್ದರು.</p>.<p>ಸದಾಶಿವನಗರದಲ್ಲಿನ ಶಿವಕುಮಾರ್ ನಿವಾಸಕ್ಕೆ ಬೆಳಿಗ್ಗೆ ಬಂದ ರೇವಂತ್, ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದರು. ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ವರ್ಷ ಪೂರೈಸಿದ ಶಿವಕುಮಾರ್ ಅವರನ್ನು ಅಭಿನಂದಿಸಿದರು.</p>.<p>ಕಾಂಗ್ರೆಸ್ ಸಂಸದರೂ ಆಗಿರುವ ಯುವ ನಾಯಕ ರೇವಂತ್ ರೆಡ್ಡಿ, ಜೂನ್ 3ರಂದು ಅಧ್ಯಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದ ಕಾರಣ, ಅಧ್ಯಕ್ಷರಾಗಿದ್ದ ಎಂ.ಉತ್ತಮ್ ಕುಮಾರ್ ರೆಡ್ಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಆ ಸ್ಥಾನಕ್ಕೆ ರೇವಂತ್ ರೆಡ್ಡಿ ಆಯ್ಕೆ ಆಗಿದ್ದಾರೆ.</p>.<p>‘ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಅಳವಡಿಸಿಕೊಂಡಿರುವ ಕಾರ್ಯತಂತ್ರಗಳು, ಎದುರಾದ ಉಪಚುನಾವಣೆಗಳಲ್ಲಿ ನಡೆಸಿದ ತಂತ್ರಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸ ಪಡೆದುಕೊಂಡು ಪಕ್ಷವನ್ನು ಸಂಘಟಿಸಿದ ಬಗ್ಗೆ ರೇವಂತ್ ರೆಡ್ಡಿ ಮಾಹಿತಿ ಪಡೆದುಕೊಂಡರು’ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರೇವಂತ್ ರೆಡ್ಡಿ, ಆ ರಾಜ್ಯದ ವಿರೋಧ ಪಕ್ಷದ ನಾಯಕ ರಘುವೀರ ರೆಡ್ಡಿ ಸೋಮವಾರ ಭೇಟಿಯಾಗಿದ್ದರು.</p>.<p>ಸದಾಶಿವನಗರದಲ್ಲಿನ ಶಿವಕುಮಾರ್ ನಿವಾಸಕ್ಕೆ ಬೆಳಿಗ್ಗೆ ಬಂದ ರೇವಂತ್, ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದರು. ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ವರ್ಷ ಪೂರೈಸಿದ ಶಿವಕುಮಾರ್ ಅವರನ್ನು ಅಭಿನಂದಿಸಿದರು.</p>.<p>ಕಾಂಗ್ರೆಸ್ ಸಂಸದರೂ ಆಗಿರುವ ಯುವ ನಾಯಕ ರೇವಂತ್ ರೆಡ್ಡಿ, ಜೂನ್ 3ರಂದು ಅಧ್ಯಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದ ಕಾರಣ, ಅಧ್ಯಕ್ಷರಾಗಿದ್ದ ಎಂ.ಉತ್ತಮ್ ಕುಮಾರ್ ರೆಡ್ಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಆ ಸ್ಥಾನಕ್ಕೆ ರೇವಂತ್ ರೆಡ್ಡಿ ಆಯ್ಕೆ ಆಗಿದ್ದಾರೆ.</p>.<p>‘ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಅಳವಡಿಸಿಕೊಂಡಿರುವ ಕಾರ್ಯತಂತ್ರಗಳು, ಎದುರಾದ ಉಪಚುನಾವಣೆಗಳಲ್ಲಿ ನಡೆಸಿದ ತಂತ್ರಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸ ಪಡೆದುಕೊಂಡು ಪಕ್ಷವನ್ನು ಸಂಘಟಿಸಿದ ಬಗ್ಗೆ ರೇವಂತ್ ರೆಡ್ಡಿ ಮಾಹಿತಿ ಪಡೆದುಕೊಂಡರು’ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>