ಕಾಂಗ್ರೆಸ್ ಸಂಸದರೂ ಆಗಿರುವ ಯುವ ನಾಯಕ ರೇವಂತ್ ರೆಡ್ಡಿ, ಜೂನ್ 3ರಂದು ಅಧ್ಯಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದ ಕಾರಣ, ಅಧ್ಯಕ್ಷರಾಗಿದ್ದ ಎಂ.ಉತ್ತಮ್ ಕುಮಾರ್ ರೆಡ್ಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಆ ಸ್ಥಾನಕ್ಕೆ ರೇವಂತ್ ರೆಡ್ಡಿ ಆಯ್ಕೆ ಆಗಿದ್ದಾರೆ.