<p><strong>ಬೆಂಗಳೂರು:</strong> ಆನ್ಲೈನ್ ಜೂಜು ಚಟುವಟಿಕೆ ನಿಯಂತ್ರಿಸುವ ವಿಷಯದಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರವನ್ನು ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಆನ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ. ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ತಿಳಿಸಿದರು.</p>.<p>‘ಸೂಕ್ತ ನಿಯಮಾವಳಿ ರೂಪಿಸುವ ತನಕ ಎಲ್ಲ ರೀತಿಯ ಆನ್ಲೈನ್ ಜೂಜಾಟ ನಿಲ್ಲಿಸಬೇಕು’ ಎಂದು ದಾವಣಗೆರೆ ನಿವಾಸಿ ಡಿ.ಆರ್. ಶಾರದಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿ ವಿಚಾರಣೆಯಲ್ಲಿ ತಮ್ಮನ್ನೂ ಪ್ರತಿವಾದಿ ಆಗಿಸುವಂತೆ ಕೋರಿ ಮುಂಬೈ ಮೂಲದ ಆನ್ಲೈನ್ ರಮ್ಮಿ ಫೌಂಡೇಷನ್(ಟಿಒಆರ್ಎಫ್) ಮಧ್ಯಂತರ ಅರ್ಜಿ ಸಲ್ಲಿಸಿದೆ. ಅರ್ಜಿ ಅನುಮತಿಸಿರುವ ಪೀಠ, ಮಾ.31ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.</p>.<p>‘ಆನ್ಲೈನ್ ರಮ್ಮಿ ಆಟವನ್ನು ಪ್ರೋತ್ಸಾಹಿಸಿ, ಸುಗಮಗೊಳಿಸುವುದು ಫೆಡರೇಷನ್ನ ಉದ್ದೇಶ. ಆಟಗಾರರ ಆಸಕ್ತಿಗಳನ್ನು ರಕ್ಷಿಸುವ ಕೆಲಸವನ್ನೂ ಫೆಡರೇಷನ್ ಮಾಡುತ್ತಿದೆ’ ಎಂದು ಟಿಒಆರ್ಎಫ್ ಪರ ವಕೀಲ ಮುಕುಲ್ ರೋಹಟಗಿ ವಿವರಿಸಿದರು.</p>.<p>‘ರಮ್ಮಿ ಒಂದು ಕೌಶಲದ ಆಟವೇ ಹೊರತು ಜೂಜಲ್ಲ. ಇದಕ್ಕೆ ಪರವಾನಗಿ ನೀಡಿದರೆ ಶುಲ್ಕದಿಂದಲೇ ಮುಂದಿನ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರ ₹1 ಸಾವಿರ ಕೋಟಿ ವರಮಾನ ನಿರೀಕ್ಷಿಸಬಹುದು’ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆನ್ಲೈನ್ ಜೂಜು ಚಟುವಟಿಕೆ ನಿಯಂತ್ರಿಸುವ ವಿಷಯದಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರವನ್ನು ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಆನ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದ ವಿಷಯವನ್ನು ಸಂಪುಟದ ಮುಂದೆ ಇಡಲಾಗಿದೆ. ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ತಿಳಿಸಿದರು.</p>.<p>‘ಸೂಕ್ತ ನಿಯಮಾವಳಿ ರೂಪಿಸುವ ತನಕ ಎಲ್ಲ ರೀತಿಯ ಆನ್ಲೈನ್ ಜೂಜಾಟ ನಿಲ್ಲಿಸಬೇಕು’ ಎಂದು ದಾವಣಗೆರೆ ನಿವಾಸಿ ಡಿ.ಆರ್. ಶಾರದಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿ ವಿಚಾರಣೆಯಲ್ಲಿ ತಮ್ಮನ್ನೂ ಪ್ರತಿವಾದಿ ಆಗಿಸುವಂತೆ ಕೋರಿ ಮುಂಬೈ ಮೂಲದ ಆನ್ಲೈನ್ ರಮ್ಮಿ ಫೌಂಡೇಷನ್(ಟಿಒಆರ್ಎಫ್) ಮಧ್ಯಂತರ ಅರ್ಜಿ ಸಲ್ಲಿಸಿದೆ. ಅರ್ಜಿ ಅನುಮತಿಸಿರುವ ಪೀಠ, ಮಾ.31ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.</p>.<p>‘ಆನ್ಲೈನ್ ರಮ್ಮಿ ಆಟವನ್ನು ಪ್ರೋತ್ಸಾಹಿಸಿ, ಸುಗಮಗೊಳಿಸುವುದು ಫೆಡರೇಷನ್ನ ಉದ್ದೇಶ. ಆಟಗಾರರ ಆಸಕ್ತಿಗಳನ್ನು ರಕ್ಷಿಸುವ ಕೆಲಸವನ್ನೂ ಫೆಡರೇಷನ್ ಮಾಡುತ್ತಿದೆ’ ಎಂದು ಟಿಒಆರ್ಎಫ್ ಪರ ವಕೀಲ ಮುಕುಲ್ ರೋಹಟಗಿ ವಿವರಿಸಿದರು.</p>.<p>‘ರಮ್ಮಿ ಒಂದು ಕೌಶಲದ ಆಟವೇ ಹೊರತು ಜೂಜಲ್ಲ. ಇದಕ್ಕೆ ಪರವಾನಗಿ ನೀಡಿದರೆ ಶುಲ್ಕದಿಂದಲೇ ಮುಂದಿನ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರ ₹1 ಸಾವಿರ ಕೋಟಿ ವರಮಾನ ನಿರೀಕ್ಷಿಸಬಹುದು’ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>