‘ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಶಾಸ್ತ್ರೀಯ ಭಾಷಾ ಗೌರವ ಪೀಠಗಳನ್ನು ಭಾಷಾ ವಿಶ್ವವಿದ್ಯಾಲಯದಲ್ಲಿ ವಿಲೀನಗೊಳಿಸುವುದು ಖಂಡನಾರ್ಹ. ತೆಲುಗು ಹಾಗೂ ಕನ್ನಡ ಸಾಹಿತ್ಯ ಲೋಕದ ಧುರೀಣರು, ಭಾಷಾಭಿಮಾನಿಗಳು ಹಾಗೂ ಕಲಾವಿದರು ಇದನ್ನು ವಿರೋಧಿಸಬೇಕು. ಈ ಸಂಬಂಧ ಸಹಿ ಸಂಗ್ರಹ ಚಳವಳಿ ಹಮ್ಮಿಕೊಂಡು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಬೇಕು’ ಎಂದು ಕರ್ನಾಟಕ ತೆಲುಗು ಅಕಾಡೆಮಿಯ ವ್ಯವಸ್ಥಾಪಕ ಅಧ್ಯಕ್ಷರೂ ಆಗಿರುವ ರಾಧಾಕೃಷ್ಣರಾಜು ತಿಳಿಸಿದ್ದಾರೆ.