‘ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಈಗಾಗಲೇ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ದೇವಾಲಯಗಳನ್ನು ಉಳಿಸಲು ಕಾನೂನು ಹೋರಾಟ ಕೈಗೊಳ್ಳುವ ವಿಚಾರವಾಗಿ ಪಕ್ಷದ ಸಭೆ ಹಾಗೂ ಶಾಸಕಾಂಗ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ನಳಿನ್ ಕುಮಾರ್ ಹೇಳಿದರು.