<p><strong>ಬೆಂಗಳೂರು:</strong> ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೋಮವಾರದಿಂದ (ಜು. 5) ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಉಡುಪಿಯ ಕೃಷ್ಣ ಮಠ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ.</p>.<p>ಶೃಂಗೇರಿ ಶಾರದಾಂಬೆ ದೇಗುಲ, ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಂದಾರ್ತಿಯ ದುರ್ಗಾ ಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳದ ಮಂಜುನಾಥೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪ, ಸಂಗಮೇಶ್ವರ ದೇವಾಲಯ, ಬಾದಾಮಿಯ ಬನಶಂಕರಿ ದೇವಸ್ಥಾನ, ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನಗಳಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ದರ್ಶನಕ್ಕೆ ಬರುವ ಭಕ್ತರು ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯ ಎಂದು ಎಲ್ಲ ದೇವಸ್ಥಾನಗಳ ಸಮಿತಿಗಳು ತಿಳಿಸಿವೆ.</p>.<p><strong>ಸದ್ಯಕ್ಕೆ ದರ್ಶನವಿಲ್ಲ: </strong>ಉಡುಪಿಯ ಕೃಷ್ಣಮಠದಲ್ಲಿ ಸದ್ಯ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿಲ್ಲ. ಒಂದು ವಾರ ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ಬಾಗಿಲು ತೆರೆಯಬೇಕೆ, ಬೇಡವೆ ಎಂಬ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಸವದತ್ತಿ ಯಲ್ಲಮ್ಮ ದೇವಸ್ಥಾನ– ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಕೆ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭಾನುವಾರ ಆದೇಶಿಸಿದ್ದಾರೆ.</p>.<p>ಯಲ್ಲಮ್ಮ ದೇವಸ್ಥಾನಕ್ಕೆ ನೆರೆಯ ಮಹಾರಾಷ್ಟ್ರದ ಭಕ್ತರು ಹೆಚ್ಚಾಗಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಸಲಾಗಿದೆ. ಆ ರಾಜ್ಯದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಿರುವುದು ಇದಕ್ಕೆ ಕಾರಣ ಎಂದು ಹೇಳಲಾಗಿದೆ.</p>.<p>ಮೈಸೂರು ಅರಮನೆ, ಮೃಗಾಲಯ ವೀಕ್ಷಣೆಗೆ ಮುಕ್ತ: ಮೈಸೂರು ಅರಮನೆ ಹಾಗೂ ಚಾಮರಾಜೇಂದ್ರ ಮೃಗಾಲಯವು ಜುಲೈ 5 ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.</p>.<p>‘ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30ರ ವರೆಗೆ ಅರಮನೆಯನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರವಾಸಿಗರು ಅರಮನೆಯ ವೆಬ್ಸೈಟ್ನಲ್ಲಿ <strong>(www.mysorepalace.gov.in) </strong>ಆನ್ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು. ಅರಮನೆ ದ್ವಾರದ ಬಳಿಯ ಟಿಕೆಟ್ ಕೌಂಟರ್ನಲ್ಲೂ ಟಿಕೆಟ್ ಖರೀದಿಸಬಹುದು’ ಎಂದು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಮೃಗಾಲಯ, ಕಾರಂಜಿ ಕೆರೆ ಮುಕ್ತ:</strong> ‘ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ಸೋಮವಾರದಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು’ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಸಫಾರಿ ಕೇಂದ್ರ ಸಹ ಆರಂಭಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೋಮವಾರದಿಂದ (ಜು. 5) ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಉಡುಪಿಯ ಕೃಷ್ಣ ಮಠ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ.</p>.<p>ಶೃಂಗೇರಿ ಶಾರದಾಂಬೆ ದೇಗುಲ, ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಂದಾರ್ತಿಯ ದುರ್ಗಾ ಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳದ ಮಂಜುನಾಥೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪ, ಸಂಗಮೇಶ್ವರ ದೇವಾಲಯ, ಬಾದಾಮಿಯ ಬನಶಂಕರಿ ದೇವಸ್ಥಾನ, ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನಗಳಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ದರ್ಶನಕ್ಕೆ ಬರುವ ಭಕ್ತರು ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯ ಎಂದು ಎಲ್ಲ ದೇವಸ್ಥಾನಗಳ ಸಮಿತಿಗಳು ತಿಳಿಸಿವೆ.</p>.<p><strong>ಸದ್ಯಕ್ಕೆ ದರ್ಶನವಿಲ್ಲ: </strong>ಉಡುಪಿಯ ಕೃಷ್ಣಮಠದಲ್ಲಿ ಸದ್ಯ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿಲ್ಲ. ಒಂದು ವಾರ ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ಬಾಗಿಲು ತೆರೆಯಬೇಕೆ, ಬೇಡವೆ ಎಂಬ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಸವದತ್ತಿ ಯಲ್ಲಮ್ಮ ದೇವಸ್ಥಾನ– ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಕೆ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭಾನುವಾರ ಆದೇಶಿಸಿದ್ದಾರೆ.</p>.<p>ಯಲ್ಲಮ್ಮ ದೇವಸ್ಥಾನಕ್ಕೆ ನೆರೆಯ ಮಹಾರಾಷ್ಟ್ರದ ಭಕ್ತರು ಹೆಚ್ಚಾಗಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಸಲಾಗಿದೆ. ಆ ರಾಜ್ಯದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಿರುವುದು ಇದಕ್ಕೆ ಕಾರಣ ಎಂದು ಹೇಳಲಾಗಿದೆ.</p>.<p>ಮೈಸೂರು ಅರಮನೆ, ಮೃಗಾಲಯ ವೀಕ್ಷಣೆಗೆ ಮುಕ್ತ: ಮೈಸೂರು ಅರಮನೆ ಹಾಗೂ ಚಾಮರಾಜೇಂದ್ರ ಮೃಗಾಲಯವು ಜುಲೈ 5 ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.</p>.<p>‘ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30ರ ವರೆಗೆ ಅರಮನೆಯನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರವಾಸಿಗರು ಅರಮನೆಯ ವೆಬ್ಸೈಟ್ನಲ್ಲಿ <strong>(www.mysorepalace.gov.in) </strong>ಆನ್ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು. ಅರಮನೆ ದ್ವಾರದ ಬಳಿಯ ಟಿಕೆಟ್ ಕೌಂಟರ್ನಲ್ಲೂ ಟಿಕೆಟ್ ಖರೀದಿಸಬಹುದು’ ಎಂದು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಮೃಗಾಲಯ, ಕಾರಂಜಿ ಕೆರೆ ಮುಕ್ತ:</strong> ‘ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ಸೋಮವಾರದಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು’ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಸಫಾರಿ ಕೇಂದ್ರ ಸಹ ಆರಂಭಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>