ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಅಭಿವೃದ್ಧಿ ಆಯುಕ್ತರಾಗಿ ರಾಜೇಶ್‌ ಗೌಡ: 10 ಐಎಎಸ್ ಅಧಿಕಾರಿಗಳು ವರ್ಗ

Last Updated 1 ಅಕ್ಟೋಬರ್ 2022, 15:51 IST
ಅಕ್ಷರ ಗಾತ್ರ

ಬೆಂಗಳೂರು: ಬದಲಿ ನಿವೇಶನ ಹಂಚಿಕೆಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಬಿಡಿಎ ಆಯುಕ್ತರ ಹುದ್ದೆಯಿಂದ ವರ್ಗಾವಣೆಯಾಗಿದ್ದ ಐಎಎಸ್‌ ಅಧಿಕಾರಿ ಎಂ.ಬಿ. ರಾಜೇಶ್‌ ಗೌಡ ಅವರನ್ನು ರೇಷ್ಮೆ ಅಭಿವೃದ್ಧಿ ಆಯುಕ್ತರು ಮತ್ತು ರೇಷ್ಮೆ ಇಲಾಖೆ ನಿರ್ದೇಶಕರ ಹುದ್ದೆಗೆ ನೇಮಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.

ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಉಲ್ಲಂಘಿಸಿರುವುದಕ್ಕಾಗಿ ರಾಜೇಶ್‌ ಗೌಡ ವಿರುದ್ಧ ಸುಪ್ರೀಂಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಬಳಿಕ ಅವರನ್ನು ಬಿಡಿಎ ಆಯುಕ್ತರ ಹುದ್ದೆಯಿಂದ ಆಗಸ್ಟ್‌ 26ರಂದು ವರ್ಗಾವಣೆ ಮಾಡಲಾಗಿತ್ತು. ಯಾವುದೇ ಹುದ್ದೆ ತೋರಿಸಿರಿಲ್ಲ. ಹತ್ತು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶನಿವಾರ ಆದೇಶ ಹೊರಡಿಸಿದ್ದು, ರಾಜೇಶ್‌ ಗೌಡ ಅವರಿಗೆ ಹುದ್ದೆ ತೋರಿಸಲಾಗಿದೆ.

ಇತರ ವರ್ಗಾವಣೆಗಳು: ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌– ಆಯುಕ್ತೆ, ಪಂಚಾಯತ್‌ ರಾಜ್‌ ಇಲಾಖೆ; ಶ್ರೀವಿದ್ಯಾ ಪಿ.– ಹೆಚ್ಚುವರಿ ಕಾರ್ಯದರ್ಶಿ, ಕೌಶಲಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ; ಹೆಪ್ಸಿಬಾ ರಾಣಿ ಕೊರ್ಲಪಾಟಿ– ಜಂಟಿ ಕಾರ್ಯದರ್ಶಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ; ಡಾ. ಶಿವಶಂಕರ ಎನ್‌.– ಕಾರ್ಯನಿರ್ವಾಹಕ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌.

ಜಾನಕಿ ಕೆ.ಎಂ.– ನಿರ್ದೇಶಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ; ಝೆಹೆರಾ ನಸೀಂ– ಜಂಟಿ ನಿರ್ದೇಶಕಿ, ನಗರ ಭೂಸಾರಿಗೆ ನಿರ್ದೇಶನಾಲಯ; ಶುಭಾ ಕಲ್ಯಾಣ್‌– ನಿರ್ದೇಶಕಿ, ಇ–ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ; ಶಿಲ್ಪಾ ಶರ್ಮ– ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ವಿದ್ಯುತ್‌ ಕಾರ್ಖಾನೆ; ಚಂದ್ರಶೇಖರ್‌ ಎನ್‌.– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT