<p><strong>ಬೆಂಗಳೂರು:</strong> ‘ಬೆಂಗಳೂರು ಮತ್ತು ಹುಬ್ಬಳ್ಳಿ–ಧಾರವಾಡಕ್ಕೆ 350 ಎಲೆಕ್ಟ್ರಿಕಲ್ ಬಸ್ ಖರೀದಿಗೆ ಟೆಂಡರ್ ಪ್ರಕ್ರಿಯೆಯನ್ನು ಸರ್ಕಾರ ಶೀಘ್ರದಲ್ಲೇ ಅಂತಿಮಗೊಳಿಸಲಿದೆ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಸವದಿ, ‘ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಾಯಧನ ನೀಡಲಿದೆ’ ಎಂದರು.</p>.<p>‘ಕೆಲವು ವರ್ಷಗಳಿಂದೀಚೆಗೆ ಸುಮಾರು ಬಸ್ಸುಗಳು 10 ಲಕ್ಷದಿಂದ 12 ಲಕ್ಷದಷ್ಟು ಕಿ.ಮೀ ಸಂಚರಿಸಿದ್ದು, ಅವುಗಳನ್ನು ಗುಜರಿಗೆ ಹಾಕಬೇಕಾಗಿದೆ. ಆ ಬಸ್ಗಳ ಬದಲು ಈ ಎಲೆಕ್ಟ್ರಿಕಲ್ ಬಸ್ಗಳನ್ನು ಬಳಸಲಾಗುವುದು’ ಎಂದೂ ಅವರು ವಿವರಿಸಿದರು.</p>.<p>ಬಸ್ ಖರೀದಿಗೆ ಅನುದಾನ ಲಭ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಿಗಮಗಳ ಸುಗಮ ಕಾರ್ಯಾಚರಣೆಗೆ ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆಯಲಾಗಿದೆ. ಈಗಾಗಲೇ ಸಾಲದ ಅರ್ಧದಷ್ಟು ಹಣ ಲಭ್ಯವಿದೆ’ ಎಂದರು.</p>.<p>ವಿವಿಧ ನಿಗಮಗಳಲ್ಲಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಚಿಸಿದ ಸಮಿತಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಸಮಿತಿ ಈಗಾಗಲೇ ನೌಕರರ ಜೊತೆ ಸಮಲೋಚನೆಗಳನ್ನು ನಡೆಸುತ್ತಿದೆ. ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ಮತ್ತು ಹುಬ್ಬಳ್ಳಿ–ಧಾರವಾಡಕ್ಕೆ 350 ಎಲೆಕ್ಟ್ರಿಕಲ್ ಬಸ್ ಖರೀದಿಗೆ ಟೆಂಡರ್ ಪ್ರಕ್ರಿಯೆಯನ್ನು ಸರ್ಕಾರ ಶೀಘ್ರದಲ್ಲೇ ಅಂತಿಮಗೊಳಿಸಲಿದೆ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಸವದಿ, ‘ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಾಯಧನ ನೀಡಲಿದೆ’ ಎಂದರು.</p>.<p>‘ಕೆಲವು ವರ್ಷಗಳಿಂದೀಚೆಗೆ ಸುಮಾರು ಬಸ್ಸುಗಳು 10 ಲಕ್ಷದಿಂದ 12 ಲಕ್ಷದಷ್ಟು ಕಿ.ಮೀ ಸಂಚರಿಸಿದ್ದು, ಅವುಗಳನ್ನು ಗುಜರಿಗೆ ಹಾಕಬೇಕಾಗಿದೆ. ಆ ಬಸ್ಗಳ ಬದಲು ಈ ಎಲೆಕ್ಟ್ರಿಕಲ್ ಬಸ್ಗಳನ್ನು ಬಳಸಲಾಗುವುದು’ ಎಂದೂ ಅವರು ವಿವರಿಸಿದರು.</p>.<p>ಬಸ್ ಖರೀದಿಗೆ ಅನುದಾನ ಲಭ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಿಗಮಗಳ ಸುಗಮ ಕಾರ್ಯಾಚರಣೆಗೆ ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆಯಲಾಗಿದೆ. ಈಗಾಗಲೇ ಸಾಲದ ಅರ್ಧದಷ್ಟು ಹಣ ಲಭ್ಯವಿದೆ’ ಎಂದರು.</p>.<p>ವಿವಿಧ ನಿಗಮಗಳಲ್ಲಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ರಚಿಸಿದ ಸಮಿತಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಸಮಿತಿ ಈಗಾಗಲೇ ನೌಕರರ ಜೊತೆ ಸಮಲೋಚನೆಗಳನ್ನು ನಡೆಸುತ್ತಿದೆ. ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>