<p><strong>ಬೆಂಗಳೂರು:</strong> ‘ಶಿಕ್ಷಣ ಇಲಾಖೆ ಪಠ್ಯಪುಸ್ತಕ ಮರು ಪರಿಷ್ಕರಣೆ ಪ್ರಕ್ರಿಯೆ ಪೂರ್ವಗ್ರಹಪೀಡಿತವಾಗಿದೆ. ಇದೇ ಪದ್ಧತಿ ಮುಂದುವರಿದರೆ ಮುಂದೆ ಗೋಡ್ಸೆ ಕುರಿತ ಅಧ್ಯಾಯವು ಪಠ್ಯಪುಸ್ತಕಗಳಲ್ಲಿ ಸೇರಿಸುವ ದಿನಗಳು ದೂರವಿಲ್ಲ’ ಎಂದು ಚಿಂತಕರು, ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿರುವ ಅವರು, ‘ಪಠ್ಯಪುಸ್ತಕ ರಚನೆಯಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬಂದಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಆರ್ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡಗೇವಾರ್ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಸಮರ್ಥಿಸಿಕೊಂಡಿರುವ ಸಚಿವರು, ಜವಾಬ್ದಾರಿಯುತ ಮತ್ತು ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಉಡಾಫೆಯಿಂದ ಮಾತನಾಡಿದ್ದಾರೆ. ಹೀಗಾಗಿ, ಯಾವುದೇ ಕಾರಣಕ್ಕೂ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡಬಾರದು’ ಎಂದು ಆಗ್ರಹಿಸಿದ್ದಾರೆ.</p>.<p>‘ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಸಂಶೋಧನೆ ಕೈಗೊಳ್ಳದ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ? ಈ ಪ್ರಶ್ನೆಗೆ ಸಂಬಂಧಪಟ್ಟವರು ಉತ್ತರ ನೀಡಿಲ್ಲ. ಈ ಸಮಿತಿ ಏಕಪಕ್ಷೀಯವಾಗಿ 10ನೇ ತರಗತಿಯ ಪಠ್ಯ ಪರಿಷ್ಕರಿಸಲಾಗಿದೆ’ ಎಂದಿದ್ದಾರೆ.</p>.<p>‘ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆ ಶಿಕ್ಷಣ ತಜ್ಞರ ಮೂಲಕವೇ ನಡೆಯಬೇಕು. ಚುನಾವಣಾ ಆಯೋಗದಂತೆ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ’ ಎಂದು ಸಲಹೆ ನೀಡಿದ್ದಾರೆ.</p>.<p>ಈ ಪತ್ರಕ್ಕೆ ಕೆ.ಮರುಳಸಿದ್ದಪ್ಪ, ವಿಜಯಾ, ರಾಜೇಂದ್ರ ಚೆನ್ನಿ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಟಿ.ಆರ್.ಚಂದ್ರಶೇಖರ್, ಹಿ.ಶಿ.ರಾಮಚಂದ್ರೇಗೌಡ, ವಿ.ಪಿ. ನಿರಂಜನಾರಾಧ್ಯ, ಕಾಳೇಗೌಡ ನಾಗವಾರ, ಕುಂ.ವೀರಭದ್ರಪ್ಪ, ರಹಮತ್ ತರಿಕೆರೆ, ವಸಂತ ಬನ್ನಾಡಿ ಸೇರಿದಂತೆ 71 ಮಂದಿ ಒಪ್ಪಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶಿಕ್ಷಣ ಇಲಾಖೆ ಪಠ್ಯಪುಸ್ತಕ ಮರು ಪರಿಷ್ಕರಣೆ ಪ್ರಕ್ರಿಯೆ ಪೂರ್ವಗ್ರಹಪೀಡಿತವಾಗಿದೆ. ಇದೇ ಪದ್ಧತಿ ಮುಂದುವರಿದರೆ ಮುಂದೆ ಗೋಡ್ಸೆ ಕುರಿತ ಅಧ್ಯಾಯವು ಪಠ್ಯಪುಸ್ತಕಗಳಲ್ಲಿ ಸೇರಿಸುವ ದಿನಗಳು ದೂರವಿಲ್ಲ’ ಎಂದು ಚಿಂತಕರು, ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿರುವ ಅವರು, ‘ಪಠ್ಯಪುಸ್ತಕ ರಚನೆಯಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬಂದಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಆರ್ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡಗೇವಾರ್ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಸಮರ್ಥಿಸಿಕೊಂಡಿರುವ ಸಚಿವರು, ಜವಾಬ್ದಾರಿಯುತ ಮತ್ತು ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಉಡಾಫೆಯಿಂದ ಮಾತನಾಡಿದ್ದಾರೆ. ಹೀಗಾಗಿ, ಯಾವುದೇ ಕಾರಣಕ್ಕೂ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡಬಾರದು’ ಎಂದು ಆಗ್ರಹಿಸಿದ್ದಾರೆ.</p>.<p>‘ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಸಂಶೋಧನೆ ಕೈಗೊಳ್ಳದ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ? ಈ ಪ್ರಶ್ನೆಗೆ ಸಂಬಂಧಪಟ್ಟವರು ಉತ್ತರ ನೀಡಿಲ್ಲ. ಈ ಸಮಿತಿ ಏಕಪಕ್ಷೀಯವಾಗಿ 10ನೇ ತರಗತಿಯ ಪಠ್ಯ ಪರಿಷ್ಕರಿಸಲಾಗಿದೆ’ ಎಂದಿದ್ದಾರೆ.</p>.<p>‘ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆ ಶಿಕ್ಷಣ ತಜ್ಞರ ಮೂಲಕವೇ ನಡೆಯಬೇಕು. ಚುನಾವಣಾ ಆಯೋಗದಂತೆ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ’ ಎಂದು ಸಲಹೆ ನೀಡಿದ್ದಾರೆ.</p>.<p>ಈ ಪತ್ರಕ್ಕೆ ಕೆ.ಮರುಳಸಿದ್ದಪ್ಪ, ವಿಜಯಾ, ರಾಜೇಂದ್ರ ಚೆನ್ನಿ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಟಿ.ಆರ್.ಚಂದ್ರಶೇಖರ್, ಹಿ.ಶಿ.ರಾಮಚಂದ್ರೇಗೌಡ, ವಿ.ಪಿ. ನಿರಂಜನಾರಾಧ್ಯ, ಕಾಳೇಗೌಡ ನಾಗವಾರ, ಕುಂ.ವೀರಭದ್ರಪ್ಪ, ರಹಮತ್ ತರಿಕೆರೆ, ವಸಂತ ಬನ್ನಾಡಿ ಸೇರಿದಂತೆ 71 ಮಂದಿ ಒಪ್ಪಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>