‘ಜಾತಿ, ಲಿಂಗ ಅಸಮಾನತೆ, ಮೌಢ್ಯ, ಯಜ್ಞಯಾಗಾದಿಗಳನ್ನು ವಿರೋಧಿಸಿದ ಬಸವಣ್ಣನವರ ಕುರಿತು ಇಲ್ಲಸಲ್ಲದ ವಿಷಯಗಳನ್ನು ಹೇಳಲಾಗಿದೆ. ಹಾಗೆಯೇ ಕುವೆಂಪು, ಅಂಬೇಡ್ಕರ್ ಹಾಗೂ ಇನ್ನಿತರ ಮಹಾನ್ ನಾಯಕರ ಕುರಿತೂ ತಪ್ಪು ಮಾಹಿತಿಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಲಾಗಿದೆ. ಬಸವಣ್ಣನವರ ಕುರಿತ ಪಠ್ಯವನ್ನು ನಾವೇ ಪರಿಷ್ಕರಿಸಿ ಸರ್ಕಾರಕ್ಕೆ ನೀಡುತ್ತೇವೆ. ಸರ್ಕಾರ ಅದನ್ನಾದರೂ ಒಪ್ಪಬಹುದು, ಇಲ್ಲವೇ ತಾನೇ ಸರಿಪಡಿಸಬಹುದು. ಹತ್ತು ದಿನಗಳ ಒಳಗಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಮುಂದೆ ಮತ್ತೆ ಸಭೆ ಸೇರಿ ಮುಂದಿನ ಹೋರಾಟದ ರೂಪುರೇಷೆ ಕುರಿತು ತೀರ್ಮಾನಿಸಲಾಗುವುದು’ ಎಂದರು.