ಯುವಕ ಬ ಮಂಗಳೂರು ವಿಮಾನನಿಲ್ದಾಣದಿಂದ ಮುಂಬೈಗೆ ಹೊರಟಿದ್ದರು. ಅದೇ ವೇಳೆ ಅವರ ಗೆಳತಿ ಮತ್ತೊಂದು ವಿಮಾನದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದರು. ಯುವಕ ಇದ್ದ ವಿಮಾನ ಹಾರಾಟದ ಸಲುವಾಗಿ ರನ್ವೇಯತ್ತ ಸಾಗುವಾಗ ಆತನಿಗೆ ಯುವತಿ ಸಂದೇಶ ಕಳುಹಿಸಿದ್ದರು. ಆ ಸಂದೇಶವನ್ನು ಯುವಕ ನೋಡುತ್ತಿದ್ದಾಗ, ಆತನ ಪಕ್ಕದ ಸೀಟಿನಲ್ಲಿದ್ದ ಪ್ರಯಾಣಿಕನೂ ಇಣುಕಿ ನೋಡಿದ್ದ. ಅದರಲ್ಲಿದ್ದ ‘ಬಾಂಬರ್’ ಎಂಬ ಪದವನ್ನು ತಪ್ಪಾಗಿ ಅರ್ಥೈಸಿಕೊಂಡು ವಿಮಾನದ ಸಿಬ್ಬಂದಿಗೆ ವಿಮಾನಕ್ಕೆ ಬೆದರಿಕೆ ಇದೆ ಎಂದು ಮಾಹಿತಿ ನೀಡಿದ್ದರು. ಬಳಿಕ ವಿಮಾನದ ಸಿಬ್ಬಂದಿಯು ಪ್ರಯಾಣಿಕರನ್ನು ಇಳಿಸಿದರು. ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ದು ಪರಿಶೀಲನೆಗೆ ಒಳಪಡಿಸಲಾಯಿತು. ವಿಮಾನದಲ್ಲಿ ಯಾವುದೇ ಅಪಾಯಕಾರಿ ವಸ್ತು ಪತ್ತೆಯಾಗಿರಲಿಲ್ಲ. ಪ್ರಯಾಣಿಕರ ಬ್ಯಾಗ್ಗಳನ್ನು ಕೂಡಾ ಪರಿಶೀಲಿಸಿದ್ದರು. ವಿಮಾನವನ್ನು ಮರಳಿ ನಿಲ್ದಾಣಕ್ಕೆ ತಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಯಿತು.