ನಗರದ ಗಾಂಧಿ ಭವನದಲ್ಲಿದಲಿತ ಸಂಘಟನೆಗಳ ಜಂಟಿ ವೇದಿಕೆಶನಿವಾರ ದುಂಡುಮೇಜಿನ ಸಭೆ ನಡೆಸಿತು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್,ಹೋರಾಟಗಾರ ಗುರುಪ್ರಸಾದ್ ಕೆರಗೋಡು, ಸಾಹಿತಿ ಬಂಜಗೆರೆ ಜಯಪ್ರಕಾಶ್, ಚಿಂತಕ ಎಸ್.ಜಿ. ಸಿದ್ಧರಾಮಯ್ಯ, ಶಿಕ್ಷಣ ತಜ್ಞ ಶ್ರೀಪಾದ ಭಟ್, ರಾಜಶೇಖರಮೂರ್ತಿ ಸೇರಿದಂತೆ ಹಲವು ಚಿಂತಕರು ಸಭೆಯಲ್ಲಿ ಭಾಗವಹಿಸಿ ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆ ರಾಜಕಾರಣ ಅಡಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.